Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಠ್ಯದಷ್ಟೆ ಕ್ರೀಡೆಯೂ ಮುಖ್ಯ, ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಶಾಸಕ ಟಿ.ರಘುಮೂರ್ತಿ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.20 : ಪಠ್ಯದಷ್ಟೆ ಕ್ರೀಡೆಯೂ ಮುಖ್ಯವಾಗಿರುವುದರಿಂದ ಮಕ್ಕಳು ಕ್ರೀಡಾಸಕ್ತಿ ಬೆಳೆಸಿಕೊಳ್ಳುವಂತೆ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಕ್ರೀಡಾಪಟುಗಳಿಗೆ ಕರೆ ನೀಡಿದರು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ, ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಳ್ಳಕೆರೆ ಇವರುಗಳ ಸಹಯೋಗದೊಂದಿಗೆ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ನಡೆದ ದಾವಣಗೆರೆ ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಪುರುಷರ ಮತ್ತು ಮಹಿಳೆಯರ 12 ನೇ ಅಥ್ಲೆಟಿಕ್ಸ್ ಕ್ರೀಡಾಕೂಟ ಹಾಗೂ ವಿ.ವಿ. ತಂಡದ ಆಯ್ಕೆ 2023-24 ನೇ ಸಾಲಿನ ಮುಕ್ತಾಯ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

134 ಕಾಲೇಜುಗಳ 800 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿರುವುದು ಸಂತೋಷದ ಸಂಗತಿ. ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.

ಚಳ್ಳಕೆರೆ ಹೆಚ್.ಪಿ.ಸಿ.ಸಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ಆರ್.ರಂಗಪ್ಪ ಮಾತನಾಡಿ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಮುಖ್ಯ. ವಿದ್ಯಾರ್ಥಿಗಳು ಮೊಬೈಲ್‍ನಲ್ಲಿ ತಲ್ಲೀನರಾಗುವುದೇ ಕ್ರೀಡೆ ಎಂದುಕೊಂಡಿರುವುದರಿಂದ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಪುರುಷರ ವಿಭಾಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಹಿಳೆಯರ ವಿಭಾಗದಲ್ಲಿ ಹೊನ್ನಾಳಿಯ ಎಸ್.ಎಂ.ಎಸ್. ಪ್ರಥಮ ದರ್ಜೆ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು. ಸಮಗ್ರ ಚಾಂಪಿಯನ್ ಪ್ರಶಸ್ತಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ತಂಡ ತನ್ನದಾಗಿಸಿಕೊಂಡಿತು.

ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಧಿಕಾರಿ ಡಾ.ವೀರಪ್ಪ, ಕ್ರೀಡಾಕೂಟದ ಕಾರ್ಯದರ್ಶಿ ಹೆಚ್.ತಿಪ್ಪೇಸ್ವಾಮಿ, ರಾಷ್ಟ್ರ ಮಟ್ಟದ ತೀರ್ಪುಗಾರ ಅರುಣ್, ಅನಿಲ್‍ಕುಮಾರ್, ಗಂಗಾಧರ್, ಡಾ.ವೀರೇಂದ್ರ, ಡಾ.ಪಾಪಣ್ಣ, ರಘುನಾಥ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ, ಇತಿಹಾಸ ಉಪನ್ಯಾಸಕಿ ಜಯಮ್ಮ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!