Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿಯಾಗಲು ತಂದೆಯೂ ಸಮರ್ಥರು ಎಂಬುದನ್ನು ಪರೋಕ್ಷವಾಗಿ ಹೇಳಿದರಾ ಸಚಿವ ಪ್ರಿಯಾಂಕ್ ಖರ್ಗೆ..?

Facebook
Twitter
Telegram
WhatsApp

ಕಲಬುರಗಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂದು ವಿಪಕ್ಷಗಳೆಲ್ಲಾ ಕಾಂಗ್ರೆಸ್ ಜೊತೆಗೆ ಕೈಜೋಡಿಸಿದ್ದು, ಇಂಡಿಯಾ ಕೂಟವನ್ನು ರಚಿಸಿಕೊಂಡಿವೆ. ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಯಾರಾಗುತ್ತಾರೆ ಎಂಬ ಚರ್ಚೆಯೂ ಸಾಕಷ್ಟು ನಡೆಯುತ್ತಿದೆ. ಇದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ತಮ್ಮ ತಂದೆಯ ಹೆಸರನ್ನೇ ಪ್ರಸ್ತಾಪ ಮಾಡಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಧಾನಿ, ಉಪಪ್ರಧಾನಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ..? ಆ ಸಮುದಾಯದವರ ದಕ್ಷತೆ ನೋಡುವುದಿಲ್ಲವಾ..? ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ನೀಡುವಾಗ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಹಲವು ವರ್ಷಗಳಿಂದ ನೋಡುತ್ತಿದ್ದೇವೆ ಎಂದಿದ್ದಾರೆ.

 

ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ನಮ್ಮ ಉದ್ದೇಶ. ಯಾರು ಪ್ರಧಾನಿ, ಯಾರೂ ಉಪಪ್ರಧಾನಿ ಎಂಬ ಸವಾಲು ಸದ್ಯಕ್ಕೆ ನಮ್ಮ ಮುಂದೆ ಇಲ್ಲ. ಕಾಂಗ್ರೆಸ್ 20-25 ಸ್ಥಾನವನ್ನು ಗೆಲ್ಲಲಿದೆ ಎಂದಿದ್ದಾರೆ. ಈ ಮೂಲಕ ತಮ್ಮ ತಂದೆಯ ಸಾಮರ್ಥ್ಯದ ಬಗ್ಗೆಯೂ ಪರೋಕ್ಷವಾಗಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!