Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸತ್ ನಲ್ಲಿ ಹೊಗೆ ಬಾಂಬ್ ದಾಳಿ ಪ್ರಕರಣ: ಬಾಗಲಕೋಟೆಯ DYSP ಮಗ ಪೊಲೀಸರ ವಶಕ್ಕೆ

Facebook
Twitter
Telegram
WhatsApp

 

 

ಬಾಗಲಕೋಟೆ: ಸಂಸತ್ ಒಳಗೆ ಕಲರ್ ಹೊಗೆ ಬಾಂಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಮನೋರಂಜನ್ ಗೆ ಸಂಬಂಧಿಸಿದವರು, ಸಂಪರ್ಕದಲ್ಲಿದ್ದವರನ್ನೆಲ್ಲಾ ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಈ ಸಂಬಂಧ ಬಾಗಲಕೋಟೆಯಲ್ಲೂ ಒಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಅವರು ಮನೋರಂಜನ್ ರೂಮ್ ಮೇಟ್ ಆಗಿದ್ದರು ಎನ್ನಲಾಗಿದೆ.

ಮನೋರಂಜನ್ ಡೈರಿಯನ್ನು ಪರಿಶೀಲನೆ ಮಾಡುತ್ತಿರುವ ಪೊಲೀಸರು, ಅದರಲ್ಲಿ ನಮೂದಿಸಿದ್ದ ಸಾಯಿಕೃಷ್ಣ ಅವರನ್ನು ಅರೆಸ್ಟ್ ಮಾಡಿದ್ದಾರೆ. ಈ ಸಾಯಿಕೃಷ್ಣ ಬಾಗಲಕೋಟೆಯ ನಿವಾಸಿ. ಇವರ ತಂದೆ ನಿವೃತ್ತ ಡಿವೈಎಸ್ಪಿ. 2008-09ರಲ್ಲಿ ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮುಗಿಸಿದ್ದರು. ಇಲ್ಲಿಯೇ ಮನೋರಂಜನ್ ಜೊತೆಯಾಗಿದ್ದರು. ಬಳಿಕ ಮನೋರಂಜನ್ ಹಾಗೂ ಸಾಯಿಕೃಷ್ಣ ರೂಮ್ ಮೇಟ್ ಕೂಡ ಆಗಿದ್ದರು.

ಕಾಲೇಜು ಮುಗಿದ ಮೇಲೆ ಫೋನ್ ಸಂಪರ್ಕದಲ್ಲಿ ಇರುವುದು ಪೊಲೀಸರ ವಿಚಾರಣೆಯಲ್ಲಿ ತಿಳಿದಿದೆ. ಇನ್ನು ಮನೋರಂಜನ್ ತಮ್ನ ಡೈರಿಯಲ್ಲಿ ಕೂಡ ಮೆನ್ಶನ್ ಮಾಡಿದ್ದಾರೆ‌. ಸದ್ಯ ಆತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಸಾಯಿಕೃಷ್ಣ ಅವರ ಅಕ್ಕ ಪ್ರತಿಕ್ರಿಯೆ ನೀಡಿದ್ದಾರೆ‌. ಮನೋರಂಜನ್ ರೂಮ್ ಮೇಟ್ ಆಗಿದ್ದ ಕಾರಣಕ್ಕೆ ಕರೆದು ವಿಚಾರಣೆ ನಡೆಸಿದ್ದಾರೆ. ಪೊಲೀಸರು ಕೇಳಿದ ಪ್ರಶ್ನೆಗಳಿಗೆಲ್ಲ ಅವನು ಉತ್ತರ ನೀಡಿದ್ದಾನೆ. ಈ ಮುಂಚೆ ಮನೋರಂಜನ್ ಕೂಡ ಸರಿಯಾಗಿಯೇ ಇದ್ದ. ಆದರೆ ಈಗ ಯಾಕೆ ಆ ರೀತಿ ಆದ ಎಂಬುದು ಮಾತ್ರ ಗೊತ್ತಿಲ್ಲ. ನನ್ನ ತಮ್ಮನಿಗೂ ಅದಕ್ಕೂ ಸಂಬಂಧವಿಲ್ಲ. ರೂಮ್ ಮೇಟ್ ಆಗಿದ್ದ ಎಂಬ ಕಾರಣಕ್ಕೆ ಅವನನ್ನು ಕರೆದು ವಿಚಾರಣೆ ಮಾಡಿದ್ದಾರೆ ಅಷ್ಟೆ ಎಂದು ಸಾಯಿಕೃಷ್ಣ ಸಹೋದರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!