Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಖಿಲ್ ಸ್ಪರ್ಧೆ ಇಲ್ಲ.. ಕುಮಾರಸ್ವಾಮಿ ತೀರ್ಮಾನವಾಗಿಲ್ಲ : ಮೋದಿ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

 

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡು ಮುನ್ನುಗ್ಗುತ್ತಿರುವ ಜೆಡಿಎಸ್ ಮತ್ತು ಬಿಜೆಪಿ ನಡುವೆ ಇಂದು ಮಹತ್ವದ ಮಾತುಕತೆ ನಡೆದಿದೆ. ಬಿಜೆಪಿ ಜೊತೆಗೆ ಕೈ ಜೋಡಿಸಿರುವ ಜೆಡಿಎಸ್ ಯಾವೆಲ್ಲಾ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಹಾಕಬಹುದು ಎಂಬ ಕುತೂಹಲವಿದೆ. ಆ ಎಲ್ಲಾ ಪ್ರಶ್ಮೆಗಳಿಗೂ ಇಂದು ಮಾಜಿ ಸಿಎಂ ಕುಮಾರಸ್ವಾಮಿ ಉತ್ತರಿಸಿದ್ದಾರೆ.

ಇಂದು ಮಾಜಿ ಪ್ರಧಾನಿ ದೇವೇಗೌಡ್ರು, ರೇವಣ್ಣ, ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಭೇಟಿ ವೇಳೆ ಹಲವು ವಿಚಾರಗಳು ಚರ್ಚೆಯಾಗಿವೆ. ಲೋಕಸಭಾ ಚುನಾವಣೆಯ ವಿಚಾರ ಚರ್ಚೆಗೆ ಬಂದಿದೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

‘ನನ್ನನ್ನು ಸ್ಪರ್ಧೆ ಮಾಡಿ ಎನ್ನುತ್ತಾರೆ. ನನ್ನ ಮೇಲಿನ ಅಭಿಮಾನಕ್ಕೆ ಕೆಲವರು ಸ್ಪರ್ಧೆ ಮಾಡಿ ಎನ್ನುತ್ತಾರೆ. ನಮ್ಮ ಪಕ್ಷ ಹಾಗೂ ಬಿಜೆಪಿಯಲ್ಲೂ ಈ ಅಭಿಪ್ರಾಯ ತಿಳಿಸುತ್ತಿದ್ದಾರೆ. ನಾನು ಮಂತ್ರಿಯಾದರೆ ರಾಜ್ಯಕ್ಕೆ ಆದ್ಯತೆ ಸಿಗಬಹುದು ಎಂಬ ಆಸೆ ಇರಬಹುದು. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ನಾನು ತುದಿಗಾಲಿನಲ್ಲಿ ನಿಂತಿಲ್ಲ. ನನ್ನ ಸ್ಪರ್ಧೆ ಬಗ್ಗೆ ಇನ್ನು ನಿರ್ಧಾರವಾಗಿಲ್ಲ ಎಂದಿರುವ ಕುಮಾರಸ್ವಾಮಿ ಅವರು, ನಿಖಿಲ್ ಸ್ಪರ್ಧೆಯ ಬಗ್ಗೆ ಮತ್ತೆ ಖಚಿತ ಪಡಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲ್ಲ. ಆದರೆ ಎಲ್ಲಾ ಅಭ್ಯರ್ಥಿಗಳ ಪರವಾಗಿ ಪ್ರಚಾರದಲ್ಲಿ ಇರುತ್ತಾರೆ. ಸೀಟು ಹಂಚಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಎರಡು ಪಕ್ಷದ ನಡುವೆ ಒಮ್ಮತ ಮೂಡಬೇಕು. ಅದಕ್ಕೆ ನಾನು ಆದ್ಯತೆ ನೀಡುತ್ತಿದ್ದೇನೆ. ಸೀಟು ಹಂಚಿಕೆಯ ವಿಚಾರ ಆಮೇಲೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ತುರುವನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ರೈತರಿಗೆ ಬೆಳೆವಿಮೆ ಹಣವನ್ನು ಖಾತೆಗೆ ಜಮಾಮಾಡುವಂತೆ ಒತ್ತಾಯಿಸಿ ರೈತರ ಮನವಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಮೇ.08 : ತಾಲ್ಲೂಕಿನ ತುರುವನೂರು ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬೆಳೆ ವಿಮೆಯ ಕಟ್ಟಿದ ರೈತರಿಗೆ ವಿಮಾ ಕಂಪನಿಯವರು

ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವುದಕ್ಕಾಗಿ ವಿಧಾನ ಪರಿಷತ್‍ನಲ್ಲಿ ಶಿಕ್ಷಕರ ಪರವಾಗಿ ಹೋರಾಟ : ಲೋಕೇಶ್ ತಾಳಿಕಟ್ಟೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ,ಮೇ.08 : ಶಿಕ್ಷಕರುಗಳಿಗೆ ಓಪಿಎಸ್ ಅಥವಾ ಪಿಂಚಣಿಯನ್ನು ಕೊಡಿಸುವುದು. ಕಾಲ್ಪನಿಕ ವೇತನವನ್ನು ಕೊಡಿಸುವುದು. ಬಡ್ತಿ ಪಡೆದ ಶಿಕ್ಷಕರಿಗೆ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : 3-4 ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣು..!

ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಹಾಸನದ ಹಾದಿ-ಬೀದಿಯಲ್ಲಿ ಸಿಕ್ಕಿವೆ. ರಾಜ್ಯದೆಲ್ಲೆಡೆ ಈ ವಿಡಿಯೋಗಳಲ್ಲಿರುವ ಮಹಿಳೆಯರ ದರ್ಶನವಾಗಿದೆ. ಇದರಿಂದ ಎಷ್ಟೋ ಹೆಣ್ಣುಮಕ್ಕಳ ಜೀವನ ಅತಂತ್ರ ಸ್ಥಿತಿಗೆ ತಲುಪಿದೆ. ಇದೀಗ ನಾಗಮಂಗಲದ

error: Content is protected !!