Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇತಿಹಾಸದಲ್ಲಿಯೇ ಮೊದಲು ಇಷ್ಟು ಜನರನ್ನು ಅಮಾನತು ಮಾಡಿದ ಕೀರ್ತಿ ಮೋದಿಯವರಿಗೆ ಸಲ್ಲುತ್ತದೆ : ಅಮಾನತುಗೊಂಡ ಡಿಕೆ ಸುರೇಶ್ ಆಕ್ರೋಶ

---Advertisement---

ನವದೆಹಲಿ: ಸಂಸತ್ ನಲ್ಲಿ ಕಲರ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಪ್ರತಿಭಟನೆ ಮುಂದುವರೆದಿದೆ. ಜೊತೆಗೆ ಸಂಸದರ ಅಮಾನತು ಪ್ರಕ್ರಿಯೆ ಕೂಡ ಮುಂದುವರೆದಿದೆ. ಅದರಲ್ಲಿ ಇಂದು ಸಂಸದ ಡಿಕೆ ಸುರೇಶ್ ಸೇರಿದಂತೆ ಇಂದು ಕೂಡ ಮೂವರನ್ನು ಅಮಾನತು ಮಾಡಿದ್ದು, ಅಮನತುಗೊಂಡ ಸಂಸದರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ.

ಇಂದು ಅಮಾನತುಗೊಂಡವರು, ಡಿಕೆ ಸುರೇಶ್, ನಕುಲ್ ನಾಥ್, ದೀಪಕ್ ಬೈಚಕ್ ಆಗಿದ್ದಾರೆ. ಅಮಾನತುಗೊಂಡ ಬಳಿಕ ಮಾತನಾಡಿದ ಡಿಕೆ ಸುರೇಶ್, ಪ್ರಜಾಪ್ರಭುತ್ವದ ದೇಗುಲದ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ. ಗೃಹ ಸಚಿವರು ಮತ್ತು ಪ್ರಧಾನಿಗಳು ಈ ಬಗ್ಗೆ ಮಾತನಾಡಬೇಕು. ಸಂಸತ್ ಪ್ರವೇಶಿಸಲು ಪಾಸ್ ನೀಡಿದವರನ್ನು ತನಿಖೆಗೆ ಒಳಪಡಿಸಬೇಕು. ಭದ್ರತಾ ಲೋಪದ ಬಗ್ಗೆ ಪರಿಶೀಲನೆ ನಡೆಸಬೇಕಿದೆ. ಇಲ್ಲಿ ಸಂಸದರಿಗೆ ರಕ್ಷಣೆ ಇಲ್ಲ ಬೇರೆಯವರಿಗೆ ಹೇಗೆ ಎಂದು ಪ್ರಶ್ನೆ ಮಾಡಿದ್ದೆವು ಎಂದಿದ್ದಾರೆ.

ಲೋಕಸಭೆಯಲ್ಲಿ ಈ ಸಂಬಂಧ ಚರ್ಚೆ ಮಾಡುವುದಕ್ಕೆ ಅವಕಾಶ ಕೇಳಿದೆವು. ಮಾತನಾಡುವ ಹಕ್ಕನ್ನು ಕಸಿಯುವ ಪ್ರಯತ್ನ ಮಾಡುತ್ತಿದೆ ಎಂದು ಬಾವಿಗಿಳಿದು ಪ್ರತಿಭಟನೆ ಮಾಡಿದೆವು. ಹೀಗಾಗಿ ಇಂದು ಮೂವರನ್ನು ಅಮಾನತು ಮಾಡಲಾಗಿದೆ. ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಅದನ್ನು ಕಿತ್ತುಕೊಳ್ಳಲಾಗುತ್ತಿದೆ. ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಆಡಳಿತ ಪಕ್ಷ ತನ್ನ ಅನುಕೂಲಕ್ಕೆ ತಕ್ಕಂತೆ ಹೇಳಿಕೆ ನೀಡುತ್ತಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟೊಂದು ಜನರನ್ನು ಅಮಾನತು ಮಾಡಿರುವುದು. ಈ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲಬೇಕು ಎಂದು ಸಂಸದ ಡಿಕೆ ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment