ಸುದ್ದಿಒನ್, ಮೊಳಕಾಲ್ಮೂರು, ಡಿಸೆಂಬರ್. 24 : ಬಂಗಾರದ ನಾಣ್ಯಗಳಿಗಾಗಿ ಜನರು ಹುಡುಕುತ್ತಾ ತಾ ಮುಂದು, ನಾ ಮುಂದು ಎಂದು ಮುಗಿಬಿದ್ದು ತೀವ್ರ ಹುಡುಕಾಟ ನಡೆಸಿರುವ ಘಟನೆ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.
ಬಳ್ಳಾರಿ ಚಳ್ಳಕೆರೆ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ
ತಾಲೂಕಿನ ಕೆಳಗಳಹಟ್ಟಿ ಗ್ರಾಮದಲ್ಲಿ ಬಂಗಾರದ ನಾಣ್ಯಗಳು ಸಿಗುತ್ತವೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಗಳ ಜನರು ಇಂದು ಬೆಳಿಗ್ಗೆಯಿಂದಲೇ ತಂಡೋಪತಂಡವಾಗಿ ಬಂದು ಬಂಗಾರದ ನಾಣ್ಯವನ್ನು ಹುಡುಕುತ್ತಿದ್ದಾರೆ.
ಆದರೆ ಆ ಪ್ರದೇಶದಲ್ಲಿ ಕೆಲವು ನಾಣ್ಯಗಳು ದೊರೆತಿದ್ದು, ಅವು ಬಂಗಾರ ಅಥವಾ ತಾಮ್ರದ ನಾಣ್ಯಗಳು ಎಂದು ಇನ್ನೂ ಕೂಡ ದೃಢಪಟ್ಟಿಲ್ಲ. ನಾಣ್ಯದ ಅಸಲಿಯೆತ್ತು ತಿಳಿಯದ ಜನರು ನಾ ಮುಂದು ತಾ ಮುಂದು ಎನ್ನುವಂತೆ ಬಂಗಾರದ ನಾಣ್ಯಗಳನ್ನು ಹುಡುಕಲು ಮುಗಿಬಿದ್ದಿದ್ದಾರೆ.
ಈಗಾಗಲೇ ಕೆಲವು ಜನರಿಗೆ ಸಿಕ್ಕಿರುವ ನಾಣ್ಯಗಳು ಅಸಲಿಯೋ ಅಥವಾ ನಕಲಿಯೋ ಎಂಬುದು ತಿಳಿದು ಬರಬೇಕಿದೆ. ಇತ್ತೀಚೆಗಷ್ಟೇ ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿಯೂ ಕೂಡಾ ಇಂತಹದ್ದೇ ಘಟನೆ ನಡೆದಿದನ್ನು ಗಮನಿಸಬಹುದು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













