Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸದೃಢ ಭಾರತಕ್ಕೆ ಯುವಜನತೆಯ ಕೊಡುಗೆ ಮುಖ್ಯ : ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 25 –  ಸದೃಢ ಭಾರತಕ್ಕೆ ಯುವಜನತೆಯ ಕೊಡುಗೆ ಮುಖ್ಯ. ವಿದ್ಯಾರ್ಥಿಗಳ ಶ್ರಮದ ಜತೆಗೆ ಸ್ಥಳೀಯರು ಕೂಡ ಕೈ ಜೋಡಿಸಿದಾಗ ಗ್ರಾಮಗಳು ಉದ್ಧಾರವಾಗಲು ಸಾಧ್ಯ. ಸೇವೆ ನಮ್ಮದು ಸಹಕಾರ ಗ್ರಾಮದವರದು ಎಂದು ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ  ಹೇಳಿದರು.

ಎಸ್.ಜೆ.ಎಂ. ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗು ದಾವಣಗೆರೆ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತಮಟಕಲ್ಲು ಗ್ರಾಮದಲ್ಲಿ ದಿ. 24-12-23 ರಿಂದ 30-12-23 ರವರೆಗೆ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಸೇವಾ ಯೋಜನೆ ಘಟಕ- ಹಾಗೂ 2ರ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಅತಿಥಿ ಎನ್. ಚಲುವರಾಜ್ ಮಾತನಾಡಿ, ರಾಷ್ಟ್ರಿಯ ಸೇವಾ ಯೋಜನೆ ಭಾರತ ಸರ್ಕಾರದ ನಿಯೋಜಿತ ಕಾರ್ಯಕ್ರಮವಾಗಿದ್ದು, 1969ರಲ್ಲಿ ಈ ಯೋಜನೆಗೆ ಚಾಲನೆ ಸಿಕ್ಕಿತು. ಗ್ರಾಮಸ್ವರಾಜ್ಯದ ಎಲ್ಲ ಮಹತ್ವಗಳು ಇಲ್ಲಿ ಅಡಕವಾಗಿವೆ. ಈ ಸೇವೆಯನ್ನು ರಾಷ್ಟ್ರಕ್ಕೆ ಸಮರ್ಪಿತ ಎಂಬುದಾಗಿ ಮಾಡಬೇಕು. ಸ್ವಚ್ಛತೆ ನಮ್ಮ ಉದ್ದೇಶವಾಗಬೇಕು. ಇದೊಂದು ವಿಶೇಷ ಅನುಭವ ಪಡೆಯುವ ವೇದಿಕೆಯಾಗಿದೆ ಎಂದು ಹೇಳಿದರು.

ಪ್ರೊ. ಸಿ. ಬಸವರಾಜಪ್ಪ ಮಾತನಾಡುತ್ತ, ತಮಟಕಲ್ಲು ಗ್ರಾಮದ ಜನರು ಇಂತಹ ಕಾರ್ಯಕ್ರಮಗಳಿಗೆ ಉತ್ತಮ ಬೆಂಬಲ ನೀಡುತ್ತಾರೆ. ತಮ್ಮನ್ನು ಅರ್ಪಿಸಿಕೊಳ್ಳುವುದನ್ನು ಸೇವೆ ಎಂದು ಕರೆಯಲಾಗುತ್ತದೆ. ಪ್ರತಿಫಲಾಪೇಕ್ಷೆ ಇರಬಾರದು. ಗ್ರಾಮಗಳ ಸ್ವಚ್ಛತೆಯನ್ನು ಮಾಡುವ ಗುರಿ ನಮ್ಮದಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪ ಶ್ರಮವನ್ನು ಹಳ್ಳಿಗಳಿಗೆ ಸ್ವಚ್ಛತೆಗೆ ಮೀಸಲಿಡಲಿ ಎಂಬುದು ಮಹಾತ್ಮ ಗಾಂಧೀಜಿಯವರ ಆಶಯವಾಗಿದೆ. ಅವರ ಕನಸಿನಂತೆ ರಾಷ್ಟ್ರದಲ್ಲಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಈ ಸೇವೆ ಪ್ರಾರಂಭವಾಯಿತು. ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು ಕಡಿಮೆಯಾಗುತ್ತಿದೆ. ಸಮಯ ಪಾಲನೆ ಅತಿಮುಖ್ಯ. ಎನ್‍ಎಸ್‍ಎಸ್‍ನಲ್ಲಿ ಭಾಗವಹಿಸುವುದರಿಂದ ವ್ಯಕ್ತಿತ್ವ ವಿಕಸನಗೊಂಡು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರುದ್ರಮ್ಮ, ಕೆ.ಸಿ. ನಾಗರಾಜ್, ಜಿ.ಎಸ್.ನಾಗರಾಜು, ಮಂಜುನಾಥ, ಕುಮಾರ್, ಮಧು ವೇದಿಕೆಯಲ್ಲಿದ್ದರು.

ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಚ್ಛತೆ ಬಗ್ಗೆ ಎನ್.ಎಸ್.ಎಸ್. ಶಿಬಿರಾರ್ಥಿಗಳಿಂದ ಪಥಸಂಚಲನ ನಡೆಯಿತು. ಬೇಬಿ ಸ್ವಾಗತಿಸಿದರು. ಉಷಾ ಮತ್ತು ರುಚಿತಾ ನಿರೂಪಿಸಿದರು. ವರ್ಷಿತ ಪ್ರಾರ್ಥಿಸಿದರು. ದಾಕ್ಷಾಯಣಿ ವಂದಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment