Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2 ದಿನ ನಡೆದ ಅಖಿಲ ಭಾರತ ವೀರಶೈವ ಕಾರ್ಯಕ್ರಮಕ್ಕೆ ಎಂ ಬಿ ಪಾಟೀಲ್ ಗೈರಾಗಲು ಕಾರಣವೇನು..?

Facebook
Twitter
Telegram
WhatsApp

 

 

ಬೆಂಗಳೂರು: ಇತ್ತಿಚೆಗೆ ಎರಡು ದಿನಗಳ ಕಾಲ ಅಖಿಲ ಭಾರತ ವೀರಶೈವ ಮಹಾಸಭಾದ 24ನೇ ಮಹಾ ಅಧಿವೇಶನ ದಾವಣಗೆರೆಯಲ್ಲಿ ನಡೆದಿದೆ. ಈ ಕಾರ್ಯಕ್ರಮಕ್ಕೆ ರಾಜಕೀಯ ಪಕ್ಷದವರು ಸೇರಿದ್ದರು. ಆದರೆ ಕಾಂಗ್ರೆಸ್ ನಾಯಕ ಎಂ ಬಿ ಪಾಟೀಲ್ ಗೈರಾಗಿದ್ದರು. ಇದು ಹಲವರಿಗೆ ಪ್ರಶ್ನೆಯಾಗಿ ಕಾಡಿತ್ತು. ಇದೀಗ ಅದಕ್ಕೆ ಸ್ವತಃ ಎಂ ಬಿ ಪಾಟೀಲ್ ಅವರೇ ಉತ್ತರ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಎಂ ಬಿ ಪಾಟೀಲ್ ಅವರು, ಕೆ ಎಲ್ ಇ ಸೊಸೈಟಿ ಅಧ್ಯಕ್ಷರಾದ ಪ್ರಭಾಕರ ಕೋರೆ ಅವರ 50ನೇ ವಿವಾಹ ವಾರ್ಚಿಕೋತ್ಸವ ಹಾಗೂ ವಿಜಯಪುರದಲ್ಲಿ ಒಂದು ಕಾರ್ಯಕ್ರಮ ಈ ಮೊದಲೇ ನಿಗದಿಯಾಗಿತ್ತು. ಹೀಗಾಗಿ ದಾವಣಗೆರೆಯಲ್ಲಿ ನಡೆದ ವೀರಶೈವ ಕಾರ್ಯಕ್ರಮದಲ್ಲಿ ಖುದ್ದಾಗಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಆದರೆ ಅದಿವೇಶನಕ್ಕೆ ಸಂದೇಶ ಕಳುಹಿಸಿಕೊಟ್ಟಿದ್ದೆ. ಮೇಲಿನ ಕಾರ್ಯಕ್ರಮಗಳು ಮೊದಲೇ ನಿಗದಿಯಾಗಿದ್ದವು. ಇಲ್ಲವಾಗಿದ್ದರೆ, ನಾನು ಅಧಿವೇಶನಕ್ಕೆ ಹೋಗುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದರಲ್ಲಿ ಅಸಮಾಧಾನವೇನು ಇಲ್ಲ. ಅಧಿವೇಶನಕ್ಕೆ ನನ್ನನ್ನು ಉದ್ಘಾಟಕನಾಗಿ ಆಹ್ವಾನ ಮಾಡಲಾಗಿತ್ತು. ಅಧಿವೇಶನದಲ್ಲಿ ಜಾತಿ ಗಣತಿ ಕುರಿತು ನಿರ್ಣಯ ಅಂಗೀಕರಿಸಲಾಗಿದೆ. ಲಿಂಗಾಯತರಲ್ಲಿ ಇರುವ 60-70 ಒಳಪಂಗಡಗಳೆಲ್ಲವೂ ಒಂದೇ ಸೂರಿನಡಿ ಬರಬೇಕು. ಹೀಗಾದರೆ ಮಾತ್ರ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಯ ಲಾಭ ಸಿಗುತ್ತದಷ್ಟೆ. ಇದನ್ನು ನಾನು ಮೊದಲಿನಿಂದಲೂ ಹೇಳುತ್ತ ಬಂದಿದ್ದೇನೆ ಎಂದಿದ್ದಾರೆ. ಲಿಂಗಾಯತ ಸಮಾವೇಶನದ ಅಧಿವೇಶನಕ್ಕೆ ಹೋಗದೆ ಇರುವ ಕಾರಣವನ್ನು ಸಚಿವ ಎಂ ಬಿ ಪಾಟೀಲ್, ಈ ಮೂಲಕ ಬಹಿರಂಗ ಪಡಿಸಿದ್ದಾರೆ. ಗೈರಾಗಿದ್ದಕ್ಕೆ ಅಸಮಾಧಾನದ ವಿಚಾರ ಚರ್ಚೆಗೆ ಬಂದಿತ್ತು. ಅದಕ್ಕೂ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!