Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವನಿಧಿಗೆ ಚಾಲನೆ : ಗ್ಯಾರಂಟಿಗಳು ಜಾರಿಯಾದ ಮೇಲೂ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ : ಮೋದಿ ಅವರಿಗೆ ಸಿಎಂ ಸವಾಲು..!

Facebook
Twitter
Telegram
WhatsApp

 

 

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಕೂಡ ಒಂದು. ಈಗಾಗಲೇ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಇಂದಿನಿಂದ ಯುವನಿಧಿಗೂ ಚಾಲನೆ ಸಿಕ್ಕಿದೆ. ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಯೋಜನೆಗೆ ಚಾಲನೆ ನೀಡಿದ್ದಾರೆ.

 

ಯುವನಿಧಿ ಯೋಜನೆ ರಾಜ್ಯಾದ್ಯಂತ ಇಂದಿನಿಂದ ಚಾಲ್ತಿಗೆ ಬರಲಿದ್ದು, ಪದವೀಧರ ನಿರುದ್ಯೋಗಿಗಳು ಈ ಯೋಜನೆಯ ಲಾಭ ಪಡೆಯಬಹುದು. ಡಿಪ್ಲೊಮಾ ಆದವರಿಗೆ ಪ್ರತಿ ತಿಂಗಳು 1500, ಪದವಿ ಮುಗಿಸಿದವರಿಗೆ ಪ್ರತಿ ತಿಂಗಳು 3000 ರೂಪಾಯಿ ಎರಡು ವರ್ಷಗಳ ಕಾಲ ಸಿಗಲಿದೆ. ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸಚಿವರಾದ ಶರಣ ಪ್ರಕಾಶ್, ನಾಗೇಂದ್ರ, ಪ್ರಿಯಾಂಕದ ಖರ್ಗೆ, ಎಂ ಸಿ ಸುಧಾಕರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಿಎಂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ದಿವಾಳಿಯಾಗಲಿದೆ ಎಂದು ಪಿಎಂ ಮೋದಿ ಹೇಳಿದ್ದರು. ಆದರೆ ರಾಜ್ಯದ ಜನತೆಗೆ ಈಗಲೂ ಹೇಳುತ್ತೇನೆ. ಗ್ಯಾರಂಟಿಗಳನ್ನು ಜಾರಿ ಮಾಡಿದ ಮೇಲೂ ರಾಜ್ಯದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ. ದಿವಾಳಿಯಾಗಲಿದೆ ಎನ್ನುವುದಕ್ಕೆ ಮೋದಿ ಏನು ಆರ್ಥಿಕ ತಜ್ಞರಾ..? ನರೇಂದ್ರ ಮೋದಿಜೀ ಕರ್ನಾಟಕ ರಾಜ್ಯ ದಿವಾಳಿಯಾಗಿಲ್ಲ. ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಆರ್ಥಿಕವಾಗಿ ಗ್ಯಾರಂಟಿ ಜಾರಿ ಮಾಡಿದ ಮೇಲೂ ಕರ್ನಾಟಕ ಸದೃಢವಾಗಿದೆ. 39,000 ಕೋಟಿ ರೂಪಾಯಿಗಳನ್ನ ಈ ವರ್ಷ ನಾವು ಗ್ಯಾರಂಟಿಗಳಿಗೆ ಒದಗಿಸಿದ್ದೇವೆ. ಮಾರ್ಚ್ ಕೊನೆವರೆಗೆ 250 ಕೋಟಿ ರೂ. ಖರ್ಚು ಮಾಡ್ತಿದ್ದೇವೆ. ಯುವನಿಧಿ ಯೋಜನೆ 2024ರ ಜನವರಿಯಲ್ಲಿ ಈ ಯೋಜನೆ ಪ್ರಾರಂಭವಾಗುತ್ತಿದೆ. ಪ್ರಧಾನಿ ಮೋದಿಯವರು ಗ್ಯಾರಂಟಿ ಜಾರಿ ಮಾಡೋಕ್ಕಾಗೋದಿಲ್ಲ. ಇದನ್ನ ಜಾರಿ ಮಾಡಿದ್ರೆ ಕರ್ನಾಟಕ ದಿವಾಳಿಯಾಗುತ್ತೆ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!