Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯಲ್ಲಿ ಯಾರ್ಯಾರು, ಎಲ್ಲೆಲ್ಲಿ ಲೂಟಿ ಮಾಡಿ ಆಸ್ತಿ ಮಾಡಿದ್ದಾರೆ ಅಂತ ಗೊತ್ತು : ಶಾಸಕ ಯತ್ನಾಳ್

---Advertisement---

 

 

ವಿಜಯಪುರ: ಶಾಸಕ ಯತ್ನಾಳ್ ಆಗಾಗ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರರ ಮೇಲೆ ಕಿಡಿಕಾರುತ್ತಲೆ ಇರುತ್ತಾರೆ. ಇಂದು ಕೂಡ ಕೊರೊನಾ ವಿಚಾರಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಕೊರೊನಾ ಮೊದಲ ಅಲೆಯಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು. ಈ ವೇಳೆ 40 ಸಾವಿರ ಕೋಟಿ ಅವ್ಯವಹಾರವಾಗಿದೆ. ನಮ್ಮ ಸರ್ಕಾರ ಇದ್ದರೇನು..? ಬೇರೆ ಸರ್ಕಾರವಿದ್ದರೇನು..? ಕಳ್ಳರು ಕಳ್ಳರೆ ಅಲ್ವಾ. ಯಡಿಯೂರಪ್ಪ ಸರ್ಕಾರವಿದ್ದಾಗ ಪ್ರತಿಯೊಬ್ಬ ರೋಗಿಗೆ 8 ರಿಂದ 10 ಲಕ್ಷ ಬಿಲ್ ಮಾಡಿದ್ದಾರೆ. ಬಿಜೆಪಿಯಲ್ಲಿ ಯಾರು ಯಾರು ಹಣ ಮಾಡಿ, ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆಂದು ಹೊರ ತೆಗೆಯುತ್ತೇನೆ ಎಂದಿದ್ದಾರೆ.

 

ಯಡಿಯೂರಪ್ಪ ಅವರು 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ನಿಹದಿ ಪಡಿಸಿದ್ದರು. ಬೆಂಗಳೂರಿನಲ್ಲಿ ಹತ್ತು ಸಾವಿರ ಬೆಡ್ ಗಳನ್ನು ಬಾಡಿಗೆ ಪಡೆದಿದ್ದರು. ಇದರಲ್ಲಿ ಎಷ್ಟು ಸಾವಿರ ಕೋಟಿ ಕೊಳ್ಳೆ ಹೊಡೆದಿದ್ದೀರಿ. ವಿಧಾನಸೌಧದಲ್ಲಿ ಬಿ ಎಸ್ ಯಡಿಯೂರಪ್ಪ ಅವರಿಗೆ ಈ ವಿಚಾರವನ್ನು ನೇರವಾಗಿ ಹೇಳಿರುವೆ. ನನಗೆ ಕೊರೊನಾ ಬಂದಾಗ ಮಣಿಪಾಲ್ ನಲ್ಲಿ 50-80 ಸಾವಿರ ತೆಗೆದುಕೊಂಡರು. ಇಷ್ಟು ಹಣವನ್ನು ಬಡವರಾದವರು ಎಲ್ಲಿ ಕೊಡಬೇಕು ಎಂದು ಅಂದೇ ಪ್ರಶ್ನಿಸಿದೆ. ನಾನು ಮಾತನಾಡುವುದಕ್ಕೆ ನೋಟೀಸ್ ಕೊಡಲಿ, ಹೊರಗೆ ಹಾಕಲಿ. ಸತ್ಯ ಹೇಳಿದರೆ ಭಯ. ಇವರೆಲ್ಲರ ಬಣ್ಣ ಬಯಲು ಮಾಡುವೆ. ಎಲ್ಲರು ಕಳ್ಳರಾದರೆ ರಾಜ್ಯ, ದೇಸದವನ್ನು ಉಳಿಸುವುದು ಯಾರು..? ಪ್ರಧಾನಿ ಮೋದಿ ಅವರು ಇದ್ದಾರೆ ಎಂಬ ಕಾರಣಕ್ಕೆ ದೇಶ ಉಳಿದಿದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment