Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : 12 ಮಂದಿ ಸಜೀವ ದಹನ

---Advertisement---

 

ಸುದ್ದಿಒನ್, ಮಧ್ಯಪ್ರದೇಶ, ಡಿಸೆಂಬರ್.28 :  ಬುಧವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮುಂದೆ ಬರುತ್ತಿದ್ದ ಪ್ರಯಾಣಿಕರ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಇದರಿಂದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 12 ಮಂದಿ ಬೆಂಕಿಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

 

 

ಮಾಹಿತಿಯ ಪ್ರಕಾರ, ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಗುನಾ-ಆರನ್ ರಸ್ತೆಯಲ್ಲಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. 12 ಮಂದಿ ಸಜೀವ ದಹನವಾಗಿದ್ದಾರೆ.
ಅವರಲ್ಲಿ 9 ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇತರ 13 ಮಂದಿ ಗಾಯಗೊಂಡಿದ್ದಾರೆ.  ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗುನಾ ಜಿಲ್ಲಾಧಿಕಾರಿ ತರುಣ್ ರಾಠಿ ಟ್ವೀಟ್ ಮಾಡಿದ್ದಾರೆ. ಬೆಂಕಿಯಲ್ಲಿ ಶವಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿವೆ ಎಂದು ಹೇಳಲಾಗಿದ್ದು, ಗುರುತಿಸಲು ಡಿಎನ್ ಎ ಪರೀಕ್ಷೆ ನಡೆಸಲಾಗುತ್ತಿದೆ. ಅಪಘಾತದ ಸ್ಥಳದಿಂದ ಎಲ್ಲಾ ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅವರು ಹೇಳಿದರು. ಅಪಘಾತದ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ. ಮಾಹಿತಿ ಪಡೆದ ನಂತರ ಮುಖ್ಯಮಂತ್ರಿ ಮೋಹನ್ ಯಾದವ್ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಗಾಯಗೊಂಡಿರುವ ಪ್ರತಿಯೊಬ್ಬರಿಗೂ ರೂ.50 ಸಾವಿರ ನೀಡಲಾಗುವುದು. ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಯಾದವಾಡ ಸೂಚಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment