Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕೋಲಾರ ಜನತೆಯ ‘ಕೈ’ಗೆ ಚಿಪ್ಪು : ಬಿಜೆಪಿಯಿಂದ ಪ್ರಶ್ನೆಗಳ ಸುರಿಮಳೆ

---Advertisement---

 

ಬೆಂಗಳೂರು: ಕೋಲಾರದ ವಿಚಾರಕ್ಕೆ ಬಿಜೆಪಿ, ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಟ್ವೀಟ್ ಮೂಲಕ ಹಲವು ಪ್ರಶ್ನೆಗಳನ್ನು ಕೇಳಿದೆ. ಕೋಲಾರ ಜನತೆಯ “ಕೈ”ಗೆ ಚಿಪ್ಪು ಕೊಟ್ಟು, ಈಗ ಚುನಾವಣೆಗಾಗಿ ಅವರ ಕಾಲು ಹಿಡಿಯಲು ಹೊರಟಿರುವ ಸಿಎಂ @siddaramaiah ಅವರೇ, ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!

▪️ಕೋಲಾರದ ಶಾಸಕರಿಗೆ ಮಂತ್ರಿಗಿರಿ ನೀಡಲಿಲ್ಲ ಏಕೆ?
▪️ಜಿಲ್ಲೆಯ ರೈತರ ಹಾಲಿಗೆ ಇನ್ನೂ ₹7 ಸಬ್ಸಿಡಿ ನೀಡಿಲ್ಲ ಏಕೆ?
▪️ಮಾವು ಬೆಳೆಗಾರರಿಗೆ ನೀಡಿದ ಆಶ್ವಾಸನೆ ಈಡೇರಿಸಿಲ್ಲ ಏಕೆ?
▪️ಸಿಎಂ ಆದ ತಕ್ಷಣವೇ ಜಿಲ್ಲೆಯನ್ನು ಜಿಹಾದಿಗಳಿಗೆ ಅಡವಿಟ್ಟಿದ್ದೇಕೆ?
▪️ಶಾಂತಿ ಆವರಿಸಿದ್ದ ಕೋಲಾರದಲ್ಲಿ ಅಶಾಂತಿ ಸೃಷ್ಟಿಸಿದ್ದೇಕೆ?
▪️ಕೋಲಾರದಲ್ಲಿ ರೈತ ಮಾಲ್ ಸ್ಥಾಪನೆ ಮಾಡುವುದು ಯಾವಾಗ?

 

ಸಿದ್ದರಾಮಯ್ಯರವರೇ, ಚಿನ್ನದ ಭೂಮಿ ಕೋಲಾರಮ್ಮನ ನಾಡಿಗೆ ಕಾಲಿಡುವುದಕ್ಕೆ ಯಾವ ನೈತಿಕತೆ ಉಳಿಸಿಕೊಂಡಿದ್ದೀರಿ. ಮೊದಲು ಈ ಪ್ರಶ್ನೆಗಳಿಗೆ ಉತ್ತರಿಸಿ..!? ಎಂದು ಟ್ವೀಟ್ ಮಾಡಿದೆ.

 

ಯುವನಿಧಿಯ ಬಗ್ಗೆಯೂ ಟ್ವೀಟ್ ಮಾಡಿ, ಯುವಜನತೆಗೆ ಸಿದ್ದರಾಮಯ್ಯ ಸರ್ಕಾರ ವಂಚಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿಯಲ್ಲಿ ಪದವಿ ಮತ್ತು ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಾಸಿಕ ತಲಾ 3 ಸಾವಿರ ಹಾಗೂ 1500 ರೂಪಾಯಿ ನೀಡುವುದಾಗಿ ಘೋಷಿಸಿತ್ತು. ಆದರೆ ಇಂದು 2022-23 ರಲ್ಲಿ ತೇರ್ಗಡೆ ಹೊಂದಿದ 3 ರಿಂದ 4 ಲಕ್ಷ ವಿದ್ಯಾರ್ಥಿಗಳಿಗೆ ಮಾತ್ರ ಯುವನಿಧಿ ಬಿಡುಗಡೆ ಮಾಡುವ ಮೂಲಕ ತಾರಮ್ಯದ ನಡೆ ಪ್ರದರ್ಶಿಸುತ್ತಿದೆ‌ ಎಂದು ಆಕ್ರೋಶ ಹೊರ ಹಾಕಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...