Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರವೇ ನಾರಾಯಣ ಗೌಡರ ಬಂಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ…!

Facebook
Twitter
Telegram
WhatsApp

ಬೆಂಗಳೂರು: ಕನ್ನಡ ನಾಮಫಲಕಗಳನ್ನು ಅಳವಡಿಕೆ ಮಾಡಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಕರವೇ ನಾರಾಯಣ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಾರಾಯಣ ಗೌಡ ಅವರನ್ನು ಬಂಧಿಸಿದ್ದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕನ್ನಡ ಸಾಹಿತ್ಯ ಪರಿಷತ್ ಕೂಡ ಅವರ ಬಂಧನವನ್ನು ಖಂಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಹೇಶ್ ಜೋಶಿ ಈ ಕುರಿತು ಹೇಳಿಕೆ ಪ್ರಕಟಿಸಿದ್ದು, ವಿನಾಕಾರಣ ಬಂಧಿಸಿರುವುದನ್ನು ಖಂಡಿಸುತ್ತೇವೆ.ಈ ಪ್ರತಿಭಟನೆ ಮಾಡಿದ್ದು ರಾಜ್ಯ ಸರ್ಕಾರದ ನಿಯಮ ಜಾರಿ ಮಾಡಲಿ ಎಂದೇ. ಮಾಲ್, ಅಂಗಡಿ ಸೇರಿದಂತೆ ಎಲ್ಲೆಡೆ ಶೇಕಡ 60 ರಷ್ಟು ಕನ್ನಡ ಭಾಷೆ ಇರಲಿ ಎಂದು ರಾಜ್ಯ ಸರ್ಕಾರ ನಿಯಮ ಮಾಡಿದೆ. ಅದರ ಜಾರಿಗೆ ಎಲ್ಲರೂ ಹೋರಾಟ ಮಾಡಿದ್ದಾರೆ. ಈ ಪ್ರತಿಭಟನೆಯ ಕುರಿತು ಟಿ ಎ ನಾರಾಯಣಗೌಡ ಸಾಕಷ್ಟು ಮುಂಚೆಯೇ ಸಾಮಾಜಿಕ ಜಾಲತಾಣ ಕರಪತ್ರ, ಜಾಹೀರಾತುಗಳ ಮೂಲಕ ಪ್ರಕಟಣೆ ನೀಡಿದ್ದರು.

ರಾಜ್ಯ ಸರ್ಕಾರವು ಮತ್ತು ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಕಾರರ ವಿಷಯದಲ್ಲಿ ಸಂವೇದನಾಶೀಲವಾಗಿ ವರ್ತಿಸಬಹುದಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಇಲ್ಲವೆ ಕರ್ನಾಟಕ ರಾಜ್ಯ ವಾಣಿಜ್ಯ ಮಹಾಮಂಡಳಿಯ ನೇತೃತ್ವದಲ್ಲಿ ದುಂಡು ಮೇಜಿನ ಸಭೆಯನ್ನು ಮೊದಲೇ ನಡೆಸಿದ್ದರೆ ಕ.ರ.ವೇ ಪ್ರತಿಭಟನೆಯು ನಡೆಯುತ್ತಲೇ ಇರಲಿಲ್ಲ. ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವ ಮುನ್ನ, ಬಂಧಿಸಿರುವ ಟಿ ಎ ನಾರಾಯಣ ಗೌಡ ಹಾಗೂ ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮಹೇಶ್ ಜೋಶಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

error: Content is protected !!