Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರವೇ ನಾರಾಯಣ ಗೌಡರ ಬಂಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ…!

---Advertisement---

ಬೆಂಗಳೂರು: ಕನ್ನಡ ನಾಮಫಲಕಗಳನ್ನು ಅಳವಡಿಕೆ ಮಾಡಬೇಕೆಂದು ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಕರವೇ ನಾರಾಯಣ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಾರಾಯಣ ಗೌಡ ಅವರನ್ನು ಬಂಧಿಸಿದ್ದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಕನ್ನಡ ಸಾಹಿತ್ಯ ಪರಿಷತ್ ಕೂಡ ಅವರ ಬಂಧನವನ್ನು ಖಂಡಿಸಿದೆ.

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷರಾದ ಮಹೇಶ್ ಜೋಶಿ ಈ ಕುರಿತು ಹೇಳಿಕೆ ಪ್ರಕಟಿಸಿದ್ದು, ವಿನಾಕಾರಣ ಬಂಧಿಸಿರುವುದನ್ನು ಖಂಡಿಸುತ್ತೇವೆ.ಈ ಪ್ರತಿಭಟನೆ ಮಾಡಿದ್ದು ರಾಜ್ಯ ಸರ್ಕಾರದ ನಿಯಮ ಜಾರಿ ಮಾಡಲಿ ಎಂದೇ. ಮಾಲ್, ಅಂಗಡಿ ಸೇರಿದಂತೆ ಎಲ್ಲೆಡೆ ಶೇಕಡ 60 ರಷ್ಟು ಕನ್ನಡ ಭಾಷೆ ಇರಲಿ ಎಂದು ರಾಜ್ಯ ಸರ್ಕಾರ ನಿಯಮ ಮಾಡಿದೆ. ಅದರ ಜಾರಿಗೆ ಎಲ್ಲರೂ ಹೋರಾಟ ಮಾಡಿದ್ದಾರೆ. ಈ ಪ್ರತಿಭಟನೆಯ ಕುರಿತು ಟಿ ಎ ನಾರಾಯಣಗೌಡ ಸಾಕಷ್ಟು ಮುಂಚೆಯೇ ಸಾಮಾಜಿಕ ಜಾಲತಾಣ ಕರಪತ್ರ, ಜಾಹೀರಾತುಗಳ ಮೂಲಕ ಪ್ರಕಟಣೆ ನೀಡಿದ್ದರು.

ರಾಜ್ಯ ಸರ್ಕಾರವು ಮತ್ತು ಪೊಲೀಸರು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಕಾರರ ವಿಷಯದಲ್ಲಿ ಸಂವೇದನಾಶೀಲವಾಗಿ ವರ್ತಿಸಬಹುದಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ತಿನ ಇಲ್ಲವೆ ಕರ್ನಾಟಕ ರಾಜ್ಯ ವಾಣಿಜ್ಯ ಮಹಾಮಂಡಳಿಯ ನೇತೃತ್ವದಲ್ಲಿ ದುಂಡು ಮೇಜಿನ ಸಭೆಯನ್ನು ಮೊದಲೇ ನಡೆಸಿದ್ದರೆ ಕ.ರ.ವೇ ಪ್ರತಿಭಟನೆಯು ನಡೆಯುತ್ತಲೇ ಇರಲಿಲ್ಲ. ಕನ್ನಡಿಗರ ಆಕ್ರೋಶದ ಕಟ್ಟೆ ಒಡೆಯುವ ಮುನ್ನ, ಬಂಧಿಸಿರುವ ಟಿ ಎ ನಾರಾಯಣ ಗೌಡ ಹಾಗೂ ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಮಹೇಶ್ ಜೋಶಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment