ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ದಾವಣಗೆರೆ: ಇತ್ತಿಚೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮದೇ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಈ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬುದ್ದಿ ಮಾತು ಹೇಳಿದ್ದಾರೆ. ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ರಾಜ್ಯಾಧ್ಯಕ್ಷರ ಆಯ್ಕೆ ತಪ್ಪಾಗಿದೆ ಎನಿಸದರೆ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಲಿ ಎಂದು ಸಲಹೆ ನೀಡಿದ್ದಾರೆ.
ಪಕ್ಷದ ವಿರುದ್ಧ ಬಹಿರಂಗ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ. ಯಾವುದೇ ರೀತಿಯ ದೂರು, ದುಮ್ಮಾನಗಳಿದ್ದರೆ ರಾಷ್ಟ್ರೀಯ ಅಧ್ಯಕ್ಷರಿಗೆ ತಲುಪಿಸಬೇಕು. ಹೀಗೆ ಬಹಿರಂಗ ಹೇಳಿಕೆಗಳನ್ನು ಕೊಡುವವರಿಗೆ ನಾನು ಹೇಳುವುದು ಏನೆಂದರೆ, ಪಕ್ಷದ ಮೇಲೆ ಅಭಿಮಾನ, ಗೌರವ ಇದ್ದರೆ ಈ ರೀತಿ ಬಹಿರಂಗ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಬೇಕು. ಇದು ಸೆಇ ಆಗಿರುವುದಿಲ್ಲ ಎಂದಿದ್ದಾರೆ.
ಯುವ ರಾಜ್ಯಾಧ್ಯಕ್ಷರನ್ನು ನೇಮಕ ಮಾಡುವುದಕ್ಕೆ, ರಾಷ್ಟ್ರೀಯ ಅಧಗಯಕ್ಷರು, ವರಿಷ್ಠರು, ಪ್ರಧಾನಿಯವರು ಕುಳಿತು, ಚರ್ಚೆ ಮಾಡಿನೇ ಆಯ್ಕೆ ಮಾಡಿರುತ್ತಾರೆ. ಇದು ರಾಷ್ಟ್ರೀಯ ಘಟಕದ ನಿರ್ಣಯ. ಆದರೆ ನಿಮಗೆ ಇದು ಸರಿಯಾಗಬೇಕಿತ್ತು ಎನಿಸಿದರೆ ರಾಷ್ಟ್ರೀಯ ಅಧ್ಯಕ್ಷರನ್ನು ಸಂಪರ್ಕ ಮಾಡಿ. ಅದು ಬಿಟ್ಟು ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಅವರು ಶಾಸಕರಿದ್ದಾರೆ. ಕರೆದು ಮಾತನಾಡುತ್ತೇನೆ ಎಂದಿದ್ದಾರೆ.
ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಜೋಶಿ ಅವರು, 1971 ರಿಂದ ಗರಿಬಿ ಹಟಾವೋ ಎಂದು ಹೇಳಿದವರು ನೀವೂ. ಇಷ್ಟು ವರ್ಷಗಳ ಕಾಲ ಅಧಿಕಾರ ನಡೆಸಿದ್ದೀರಿ. ಒಂದು ಗ್ಯಾಸ್ ಕೂಡ ಕೊಡಲು ಆಗಲಿಲ್ಲ. ಮನೆ ಕೂಡ ಕೊಡಲು ಆಗಲಿಲ್ಲ ಎಂದು ಗರಂ ಆಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್