Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿಂದೂ ಧರ್ಮದ ಸಂಸ್ಕೃತಿಗೆ ಧಕ್ಕೆ ತರುವ ಹೊಸ ವರ್ಷದ ಪಾರ್ಟಿಗಳಿಗೆ ಅನುಮತಿ ಬೇಡ : ವಿಶ್ವ ಹಿಂದೂ ಪರಿಷದ್ ಒತ್ತಾಯ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯ ನೆಪದಲ್ಲಿ ಹಿಂದೂ ಧರ್ಮದ ಸಂಸ್ಕೃತಿಗೆ ಧಕ್ಕೆ ತರುವ ಪಾರ್ಟಿಗಳಿಗೆ ಅನುಮತಿಯನ್ನು ನೀಡಬಾರದೆಂದು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಕಾರ್ಯಕರ್ತರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು.

ನಗರದ ತುರುವನೂರು ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ಕಚೇರಿಗೆ ತರಳಿ ಎಸ್ ಪಿ ಯವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಡಿಸೆಂಬರ್ 31 ರ ರಾತ್ರಿ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆಯ ಹೆಸರಿನಲ್ಲಿ ಕೆಲವು ಹೋಟೆಲ್‍ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಮಾದಕ ದ್ರವ್ಯಗಳು, ನೃತ್ಯ ಪಾರ್ಟಿಗಳು, ಡಿ.ಜೆ. ಪಾರ್ಟಿಗಳು ನಡೆಯುವ ಅವಕಾಶವಿದ್ದು, ಈ ರೀತಿಯ ಪಾರ್ಟಿಗಳಲ್ಲಿ ಯುವಕ ಯುವತಿಯರು ಭಾಗವಹಿಸಿ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಸ್ಕೃತಿಗೆ ದಕ್ಕೆ ತರುವಂತಹ ಕೆಲಸ ನಡೆಯಬಹುದು.

ಇಂತಹ ಕಾರ್ಯಕ್ರಮಗಳಲ್ಲಿ ಯುವಕರು
ಮಧ್ಯಪಾನ, ಗಾಂಜಾ ಸೇವನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಕೂಗಾಡುವುದು, ಗಲಾಟೆ ಮಾಡುವುದು ತೊಂದರೆ ನೀಡುವಂತಹ ಘಟನೆಗಳು ನಡೆಯುತ್ತಿದೆ. ಮತ್ತು ಮಧ್ಯಪಾನ ಸೇವನೆಯಿಂದ ಅತೀ ವೇಗವಾಗಿ ವಾಹನ ಚಲಾವಣೆ ಮಾಡುವುದು, ವೀಲಿಂಗ್ ಮಾಡುವುದು ಹೀಗೆ ಸಾರ್ವಜನಿಕರಿಗೆ ತೊಂದರೆ ನೀಡುವಂತಹ ಸಂಭವ ಇರುತ್ತದೆ. ಈ ರೀತಿಯ ಸಂದರ್ಭದಲ್ಲಿ ಅಪಘಾತಗಳಾಗಿರುವ ಉದಾಹರಣೆಗಳಿವೆ.

ಹಿಂದೂ ಧರ್ಮದ ಸಂಸ್ಕøತಿಗೆ ಧಕ್ಕೆ ತರುವ ಇಂತಹ  ಯಾವುದೇ ರೀತಿಯ ಪಾರ್ಟಿಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡುವಂತಹ ಕಾರ್ಯಕ್ರಮಗಳಿಗೆ ಅನುಮತಿ ಕೊಡಬಾರದೆಂದು ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪಿ.ರುದ್ರೇಶ್ ಜಿಲ್ಲಾ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್,  ಕೇಶವ್ ಜಿಲ್ಲಾ ಸಹ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್, ರಂಗನಾಥ್ ನಗರ ಸಹ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್. ಕಾರ್ಯಕರ್ತರಾದ ರೇಣುಸ್ವಾಮಿ, ಸುರೇಶ್, ತೇಜಸ್, ಗುರುರಾಜ್ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment