Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಪಾಳು ಬಿದ್ದ ಮನೆಯಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ : ಸಾವಿಗೆ ಕಾರಣವಾದರಾ ಆ ವ್ಯಕ್ತಿಗಳು ಯಾರು ? 

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.29 : ನಗರದ ಜೈಲ್ ರಸ್ತೆಯ ಪಾಳು ಬಿದ್ದ ಮನೆಯೊಂದರಲ್ಲಿ ಐದು ಜನರ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಗೊಂಡಿದೆ. ಇಂದು ಬೆಳಿಗ್ಗೆ ವಿಧಿ ವಿಜ್ಞಾನ ತಂತ್ರಜ್ಞರು ಭೇಟಿ ನೀಡಿ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ಕೇಸ್ ಗೊಂದು ಟ್ವಿಸ್ಟ್ ಸಿಕ್ಕಿದೆ. ಅಸ್ಥಿಪಂಜರ ಪತ್ತೆಯಾದವರ ಮನೆಯಲ್ಲಿ ಡೆತ್ ನೋಟ್ ಸಿಕ್ಕಿದೆ. ಆ ಡೆತ್ ನೋಟ್ ನಲ್ಲಿ ಇಬ್ಬರ ಹೆಸರು ಪತ್ತೆಯಾಗಿದೆ.


ಅಸ್ಥಿಪಂಜರ ಪತ್ತೆಯಾದ ಬಳಿಕ ಇದು ಕೊಲೆಯೋ, ಆತ್ಮಹತ್ಯೆಯೋ ಎಂಬ ಅನುಮಾನಗಳು ಶುರುವಾಗಿದ್ದವು. ಇದೀಗ ಪತ್ತೆಯಾಗಿರುವ ಡೆತ್ ನೋಟ್ ನಲ್ಲಿ ಆತ್ಮಹತ್ಯೆ ಎಂಬಂತೆ ಉಲ್ಲೇಖವಾಗಿದೆ. ಆತ್ಮಹತ್ಯೆಗೆ ಕಾರಣವೇನು ಎಂಬುದನ್ನು ಉಲ್ಲೇಖ ಮಾಡಲಾಗಿದೆ.  ಇಬ್ಬರು ವ್ಯಕ್ತಿಗಳು ನೀಡುತ್ತಿರುವ ಚಿತ್ರಹಿಂಸೆಯಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ಚಿತ್ರದುರ್ಗದ ಓರ್ವ ವ್ಯಕ್ತಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದ ಓರ್ವ ವ್ಯಕ್ತಿ ಎಂಬ ಶಂಕೆ ವ್ಯಕ್ತವಾಗಿದ್ದು, ಹೆಸರು ಮಾತ್ರ ಬಹಿರಂಗವಾಗಿಲ್ಲ. ಜಮೀನು ಪ್ರಕರಣದ ವಿಚಾರಣೆ ವೇಳೆ ಇಬ್ಬರು ವ್ಯಕ್ತಿಗಳು ನಮಗೆ ಹಿಂಸೆ ನೀಡುತ್ತಿದ್ದಾರೆ. ಅವರಿಂದಲೇ ಆತ್ಮಹತ್ಯೆಗೆ ಶರಣಾಗುತ್ತಿದ್ದೇವೆ ಎಂದು ಡೆತ್ ನೋಟ್ ನಲ್ಲಿ ಹೇಳಿಕೊಂಡಿದ್ದಾರೆ. ಈ ವ್ಯಕ್ತಿಗಳ ಹೆಸರನ್ನು ಪೊಲೀಸರು ಬಹಿರಂಗಗೊಳಿಸಿಲ್ಲ. ಅಲ್ಲದೇ ಡೆತ್‌ನೋಟ್‌ನಲ್ಲಿಯೂ ಸಾಕಷ್ಟು ಅನುಮಾನಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಇಬ್ಬರ ವ್ಯಕ್ತಿಗಳ ಹುಡುಕಾಟಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ನಿವೃತ್ತ ಎಂಜಿನಿಯರ್ ಜಗನ್ನಾಥ ರೆಡ್ಡಿ (70), ಪತ್ನಿ ಪ್ರೇಮಾವತಿ (60), ಮಗಳು ತ್ರಿವೇಣಿ (42), ಮಗ ಪುತ್ರರಾದ ಕೃಷ್ಣಾ ರೆಡ್ಡಿ (40) ಹಾಗೂ ನರೇಂದ್ರ ರೆಡ್ಡಿ (38) ಎಂಬುವವರು ವಾಸವಾಗಿದ್ದರು ಎಂದು ತಿಳಿದು ಬಂದಿದೆ. ಜಗನ್ನಾಥ ರೆಡ್ಡಿ ಅವರಿಗೆ ಮೂವರು ಗಂಡು ಮಕ್ಕಳು, ಒರ್ವ ಪುತ್ರಿ ಇದ್ದರು. ಯಾರಿಗೂ ಮದುವೆ ಆಗಿರಲಿಲ್ಲ ಎನ್ನಲಾಗಿದ್ದು , ಇನ್ನೊಬ್ಬ ಹಿರಿಯ ಮಗ ಮಂಜುನಾಥ ರೆಡ್ಡಿ ಎಂಬುವವರು ಈ ಹಿಂದೆಯೇ ಮೃತಪಟ್ಟಿದ್ದರು ಎನ್ನುತ್ತಾರೆ ಸಂಬಂಧಿಕರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...