Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಕ್ಷದ ಕಾರ್ಯಕರ್ತರಿಗೂ ಸೂಕ್ತ ಸ್ಥಾನಮಾನ : ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ನಿಗಮ ಮಂಡಳಿ ಸ್ಥಾನಮಾನಗಳದ್ದೇ ದೊಡ್ಡ ಸವಾಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಈ ವಿಚಾರಕ್ಕೆ ಫೈಟ್ ನಡೆಯುತ್ತಲೆ ಇದೆ. ಉದೀಗ ಫೈನಲ್ ಹಂತ ತಲುಪಿದ್ದು, ಕಾರ್ಯಕರ್ತರಿಗೂ ಸೂಕ್ತ ಸ್ಥಾನಮಾನ ನೀಡುವ ಬಗ್ಗೆ ಮಾತನಾಡಿದ್ದಾರೆ.

ಸದಾಶಿವನಗರದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸ್ಥಾನಮಾನವನ್ನು, ಕಾರ್ಯಕರ್ತರಿಗೂ ನೀಡಲಾಗುತ್ತದೆ. ಸೂಕ್ತ ಸ್ಥಾನಮಾನ ನೀಡಲು, ಎಲ್ಲಾ ನಾಯಕರು ಕೂತು ಮಾತನಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಹಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದಾರೆ. ಅದಕ್ಕಾಗಿ ಎಲ್ಲರ ಜೊತೆಗೂ ಮಾತನಾಡಬೇಕಿದೆ. ಸಂಕ್ರಾಂತಿ ಬಳಿಕ ಎಲ್ಲವೂ ತೀರ್ಮಾನವಾಗುವ ನಿರೀಕ್ಷೆ‌ ಇದೆ. ಜನಸಾಮನ್ಯರು ಅವರ ಕಷ್ಟಗಳನ್ನು ತೆಗದುಕೊಂಡು ನಮ್ಮ ಬಳಿಗೆ ಬರುತ್ತಿದ್ದಾರೆ. ಆದರೆ ಅವರ ಕಷ್ಟ ಕೇಳುವುದಕ್ಕೆ ನಾವೇ ಅವರ ಬಳಿ ಹೋಗಬೇಕು ಎಂದಿದ್ದಾರೆ.

ಇನ್ನು ಬಾಗಿಲಿಗೆ ಬಂತು ಸರ್ಕಾರ.. ಇರಲಿ ನಿಮ್ಮ ಸಹಕಾರ ಎಂಬ ಯೋಜನೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಜನರ ಒತ್ತಡಗಳು ಸ್ವಲ್ಪ ಕಡಿಮೆಯಾಗಲಿ ಎಂಬ ಕಾರಣಕ್ಕೆ. ಮುಂದಿನ ತಿಂಗಳಿನಿಂದ ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರದ ಜನರ ಅಹವಾಲನ್ನು ಸ್ವೀಕರಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡುತ್ತೇವೆ. ಇನ್ನು ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಜನವರಿ 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜೊತೆಗೆ ಸಭೆ ಮಾಡಿ, ಯೋಜನೆಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment