Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ವರ್ಷ ಆರಂಭವಾಗುತ್ತಿದೆ.. ಕಹಿ ಘಟನೆ ಮರೆಯೋಣಾ : ವಿ ಸೋಮಣ್ಣ ಬೇಸರದ ನುಡಿಗಳು

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ವಿ ಸೋಮಣ್ಣ ಅವರಿಗೆ ಅಸಮಾಧಾನವಿರುವುದು ಎಲ್ಲರಿಗೂ ಬಹಿರಂಗವಾಗಿರುವ ವಿಚಾರ. ಸಾಕಷ್ಟು ಸಲ ಹೈಕಮಾಂಡ್ ನಾಯಕರು, ಬಿಜೆಪಿ ನಾಯಕರು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಆ ಅಸಮಾಧಾನ ಆಗಾಗ ಹೊರಗೆ ಬರುತ್ತಲೇ ಇರುತ್ತದೆ. ವರ್ಷದ ಕೊನೆಯಲ್ಲಿ ವಿ ಸೋಮಣ್ಣ ಮತ್ತೆ ಬೇಸರ ಹೊರ ಹಾಕಿದ್ದಾರೆ.

ವಿಜಯನಗರದ ತಮ್ಮ ಕಚೇರಿಯಲ್ಲಿ ಮಾತನಾಎಇದ ವಿ ಸೋಮಣ್ಣ, ನನಗೆ ಆಗಿರುವ ಅನಾನುಕೂಲ ಯಾರಿಗೂ ಆಗುವುದು ಬೇಡ. ಹೊಸ ವರ್ಷ ಆರಂಭವಾಗುತ್ತಿದೆ.ವಹಳೆಯ ಕಹಿಯ ಘಟನೆ ಮರೆತು ಮುಂದೆ ಹೊಸ ವರ್ಷದಲ್ಲಿ ಮುನ್ನಡೆಯೋಣಾ. ಜನವರಿ 7 ಅಥವಾ 8 ಕ್ಕೆ ದೆಹಲಿಗೆ ಹೋಗುತ್ತೇನೆ ಎಂದು ಭಾವುಕರಾಗಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸೋಮಣ್ಣ ಅವರು ಆಕಾಂಕ್ಷಿಯಾಗಿದ್ದಾರೆ. ಈ ಬಗ್ಗೆ ಮಾತನಾಡಿದ ವಿ ಸೋಮಣ್ಣ, ಲೋಕಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಹೈಕಮಾಂಡ್ ನಾಯಕರಿಗೆ ಬಿಟ್ಟಿದ್ದು. ಅವರು ಸ್ಪರ್ಧೆ ಮಾಡು ಎಂದರೆ ಮಾಡಬೇಕಾಗುತ್ತದೆ. ನನಗೆ ನೇರವಾಗಿ ತೊಂದರೆಯಾಗಿದೆ. ಇದನ್ನು ರಾಷ್ಟ್ರೀಯ ನಾಯಕರ ಬಳಿ ಚರ್ಚೆ ಮಾಡುತ್ತೇನೆ. ಯಾರಿಂದ ತೊಂದರೆ ಆಗಿದೆಯೋ ಅವರನ್ನು ಕರೆಸಿ ಸೂಚನೆ ನೀಡಬೇಕು. ನಮ್ಮ ಮೇಲೆ ಪ್ರಹಾರ ಮಾಡದಂತೆ ಎಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ರಾಷ್ಟ್ರೀಯ ನಾಯಕರ ನಿಲುವೆ ನನ್ನ ನಿಲುವು. ನನ್ನ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ. ರಾಷ್ಟ್ರೀಯ ನಾಯಕರು ಏನು ಹೇಳುತ್ತಾರೋ ಹಾಗೆಯೇ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ಪಕ್ಷದ ಬಗ್ಗೆಯಿದ್ದ ಮನಸ್ತಾಪ ದೂರವಾದಂತೆ ಕಾಣುತ್ತಿದೆ. ಪಕ್ಷವನ್ನ ಬಿಡುವುದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರ ಅನಾವರಣವಾಗಲಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Let Jagajyoti Basaveshwara be unveiled in everyone’s heart: ADC BT Kumaraswamy ಚಿತ್ರದುರ್ಗ‌.  ಮೇ.10:   ಸರ್ಕಾರದ ಆದೇಶದಂತೆ ಎಲ್ಲಾ ಕಚೇರಿಗಳಲ್ಲಿ ಬಸವೇಶ್ವರ ಭಾವಚಿತ್ರವನ್ನು ಅನಾವರಣಗೊಳಿಸಲಾಗಿದೆ. ನಿಜವಾಗಿಯೂ ನಮ್ಮೆಲ್ಲರ ಹೃದಯದಲ್ಲಿ ಜಗಜ್ಯೋತಿ ಬಸವೇಶ್ವರರು

T20 ವಿಶ್ವಕಪ್ ಗೂ ಮುನ್ನವೇ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯ.. ಮುಂದೇನು ಕಥೆ..?

ಸದ್ಯಕ್ಕೆ ಐಪಿಎಲ್ ನಡೆಯುತ್ತಿದೆ. ಈ ಐಪಿಎಲ್ ಪಂದ್ಯಗಳು ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಆರಂಭವಾಗಲಿದೆ‌. ಜೂನ್ 2ರಿಂದ ವಿಶ್ವಕಪ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ಆಘಾತಕಾರಿ ಸುದ್ದಿಯೊಂದು ಸಿಕ್ಕಿದೆ. ಬಿಸಿಸಿಐ ನಿಂದ ಕೋಚ್

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

error: Content is protected !!