ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ. ಜ.01: ನಾಡಿನ ಶಿಲ್ಪ ಪರಂಪರೆಯನ್ನು ಜಗತ್ತಿಗೆ ಸಾರಿದ ಅಮರಶಿಲ್ಪಿ ಜಕಣಾಚಾರಿ, ಶಿಲ್ಪಕಲೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿ ಅಜರಾಮರವಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.
ಸೋಮವಾರ ನಗರದ ತರಾಸು ರಂಗಮಂದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾದ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಶಿಲ್ಪಕಲೆ ಕೆತ್ತನೆಗೆ ಸೂಕ್ಷ್ಮ ಕುಸುರಿತನ ತಂದ ಅಮರಶಿಲ್ಪಿ ಜಕಣಾಚಾರಿ, ತಮ್ಮ ಸೃಜನಾತ್ಮಕತೆ ಮೂಲಕ ಉತ್ಕøಷ್ಟತೆಯನ್ನು ತಲುಪಿದರು. ಕಲ್ಯಾಣದ ಚಾಲುಕ್ಯರು ಹಾಗೂ ಹೊಯ್ಸಳರ ಕಾಲದಲ್ಲಿ ಅವರು ನಿರ್ಮಿಸಿದ ದೇವಾಲಯಗಳು ಇಂದಿಗೂ ಜನರ ಮನಸ್ಸನ್ನು ಸೆಳೆಯುತ್ತಿವೆ. 21ನೇ ಶತಮಾನದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸೃಜನಶೀಲತೆ ಅತಿ ಮುಖ್ಯವಾಗಿದೆ. ಕ್ರಿಯಾಶೀಲತೆ ಹಾಗೂ ಸೃಜನಶೀಲತೆ ಇದ್ದವರು ಮಾತ್ರ ಸ್ಪರ್ಧಾತ್ಮಕ ಯುಗದಲ್ಲಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಬೆಂಗಳೂರಿನ ಎಂ.ಜಿ. ಸತೀಶ್ ಮುಳ್ಳೂರು ಜಕಣಾಚಾರಿ ಕುರಿತು ಉಪನ್ಯಾಸ ನೀಡಿ, ರಾಷ್ಟ್ರಕವಿ ಕುವೆಂಪು ನಾಡಗೀತೆಯಲ್ಲಿಯೇ ಕನ್ನಡ ನಾಡನ್ನು ‘ಡಂಕಣ ಜಕಣರ ನೆಚ್ಚಿನ ಬೀಡು’ ಎಂದು ಬಣ್ಣಿಸಿದ್ದಾರೆ. ವಿಶ್ವದಲ್ಲೇ ಬೇಲೂರು ಹಾಗೂ ಹಳೆಬೇಡು ಶಿಲ್ಪಕಲೆಗೆ ಹೆಸರುವಾಸಿಯಾಗಿವೆ. ಭಾರತೀಯ ಶಿಲ್ಪ ಕೆತ್ತನೆಯ ಪರಂಪರೆಯಲ್ಲಿ ಅಮರಶಿಲ್ಪ ಜಕಣಾಚಾರಿ ಸ್ಮರಣೀಯರಾಗಿದ್ದಾರೆ. ವಿಶ್ವಕರ್ಮ ಸಮಾಜಕ್ಕೆ ಮಾತ್ರ ಶಿಲ್ಪಿ ಜಕಣಾಚಾರಿ ಸೀಮಿತವಲ್ಲ. ನಾಡಿನ ಪ್ರತಿಯೊಬ್ಬರು ಜಕಣಾಚಾರಿ ಬಗ್ಗೆ ಹೆಮ್ಮೆ ಪಡಬೇಕು ಎಂದರು.
ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಕೆ.ಟಿ. ಸುರೇಶಾಚಾರ್ಯ ಮಾತನಾಡಿ, ವಿಶ್ವಕರ್ಮ ಸಮಾಜವು ಸಂಘಟನೆಯ ಮೂಲಕ ಒಗ್ಗೂಡಬೇಕಿದೆ. ನಮ್ಮ ಪರಂಪರೆಯನ್ನು ಮುಂದಿನ ಜನಾಂಗಕ್ಕೂ ತಿಳಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರಾಂಪುರದ ಶಿಲ್ಪಿ ಮಂಜುನಾಥ ಆಚಾರ್ ಅವರನ್ನು ಸನ್ಮಾನಿಸಲಾಯಿತು. ಕಲಾವಿದ ಉಮೇಶ್ ಪತ್ತಾರ ತಂಡವು ಗೀತ ಗಾಯನ ಪ್ರಸುತಪಡಿಸಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪದ ಟ್ರಸ್ಟ್ ಅಧ್ಯಕ್ಷ ಎಂ.ಶಂಕರಾಚಾರ್, ನಿವೃತ್ತ ಪಿ.ಎಸ್.ಐ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್