Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೀಟ್ ಹಾಗೂ ಐಐಟಿ-ಜೆಇಇ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ ಎಸ್. ಆರ್. ಎಸ್. ಪಿಯು ಕಾಲೇಜು ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ನ.02) : ನಗರದ ಎಸ್ ಆರ್ ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳು 2021ರ ನೀಟ್ ಮೆಡಿಕಲ್ ಫಲಿತಾಂಶದಲ್ಲಿ ಅತ್ಯುತ್ತಮ ರ್ಯಾಂಕ್‍ಗಳೊಂದಿಗೆ ಇತಿಹಾಸ ದಾಖಲಿಸಿದ್ದಾರೆ.

ನ.01 ರಂದು ಪ್ರಕಟಗೊಂಡ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಕಾಲೇಜಿನ ವಿದ್ಯಾರ್ಥಿ ಕು.ಆರ್ ಶ್ರೇಯಸ್, 620 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 1539ನೇ ಕ್ಯಾಟಗರಿ ರ್ಯಾಂಕ್ ಪಡೆದು ಜಿಲ್ಲೆಗೆ  ಕೀರ್ತಿಯನ್ನು ತಂದಿದ್ದಾರೆ.

ಅತ್ಯುತ್ತಮ ಸಾಧನೆ ಮಾಡಿದ  ಕು. ಎಲ್ ಎನ್ ನಿಹಾರಿಕ, 601 ಅಂಕಗಳೊಂದಿಗೆ ರಾಷ್ಟ್ರಮಟ್ಟದಲ್ಲಿ 7779ನೇ ಕ್ಯಾಟಗರಿ ರ್ಯಾಂಕ್ ಪಡೆದಿದ್ದಾರೆ.

ಜೆಇಇ ಮೈನ್ಸ್‍ನಲ್ಲಿ ರಾಷ್ಟ್ರಮಟ್ಟದಲ್ಲಿ 525ನೇ ರ್ಯಾಂಕ್ ಪಡೆದಿದ್ದ ಕು. ಅಮೂಲ್ಯ ಎನ್.ಪಿ. ನೀಟ್‍ನಲ್ಲೂ ರಾಷ್ಟ್ರಮಟ್ಟದ 550ನೇ ರ್ಯಾಂಕ್ ಪಡೆದಿರುವುದು ವಿಷೇಶ ಸಾಧನೆಯಾಗಿದೆ.

ಕು.ಅನುಷಾ ಜಿ. ಎಂ – 586,
ಕು.ಕೃಷ್ಣಪ್ರಸಾದ್ ಜಿ ಟಿ.- 578,
ಕು.ಅರ್ಫಾ ಎ ಆರ್- 570,
ಕು. ಶಶಾಂಕ್ ಈ – 560,
ಕು.ಹಿಮಂತ್ ರೆಡ್ಡಿ ಎಂ ಎ – 555,
ಕು. ಆಕಾಶ ಸಿ – 553,
ಕು. ಸಿಂಧು ಜಿ ಆರ್ – 540,
ಕು.ಜಗನ್ನಾಥ್ ಹೆಚ್ ಎನ್ – 540,
ಕು.ನಿಶ್ಚಿತ ಡಿ ಹೆಚ್-  526,
ಕು. ಲತಾ ಸಿ – 524,
ಕು.ಅಮೂಲ್ಯ ಎನ್ ಪಿ – 515,
ಕು.ಉದಯ್ ಕಿರಣ್ ರೆಡ್ಡಿ ಎನ್ – 515 ಹಾಗೂ ಕು.ಎರ್ರಿಸ್ವಾಮಿ ಬಿ – 502,

ಅಂಕಗಳನ್ನು ಪಡೆದು ಮೊದಲ ಸುತ್ತಿನಲ್ಲಿಯೆ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಇವರಲ್ಲದೆ ಇತರೆ 21 ವಿದ್ಯಾರ್ಥಿಗಳು 450ಕ್ಕಿಂತ ಅಧಿಕ ಅಂಕಗಳಿಸಿದ್ದು, ಇವರೆಲ್ಲರೂ ವಿವಿಧ ಮೀಸಲಾತಿಗಳಡಿಯಲ್ಲಿ ವೈದ್ಯಕೀಯ ಸೀಟುಗಳನ್ನು ಪಡೆದುಕೊಳ್ಳಲಿದ್ದಾರೆ.

ಇದರೊಂದಿಗೆ ಎಸ್ ಆರ್ ಎಸ್ ಕಾಲೇಜೊಂದರಲ್ಲೇ 37ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಎಂಬಿಬಿಎಸ್ ಸೀಟು, 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯುರ್ವೇದ ಹಾಗೂ ಇತರೆ ಭಾರತೀಯ ವೈದ್ಯಕೀಯ ಪದ್ಧತಿಯ ಸೀಟುಗಳನ್ನು ಪಡೆದುಕೊಳ್ಳಲಿದ್ದಾರೆ.

2021ರ ನೀಟ್ ಪ್ರವೇಶ ಪರೀಕ್ಷೆ ಅರ್ಹತೆ ಗಳಿಸಿದವರ ಒಟ್ಟು ಸಂಖ್ಯೆ 178. ಹಾಗೂ ಕಳೆದೆರಡು ವರ್ಷಗಳಿಂದ IIಖಿ ಗೆ ಪ್ರವೇಶ ಪಡೆದವರು 5 ಮತ್ತು ಓIಖಿ ಗೆ 12 ವಿದ್ಯಾರ್ಥಿಗಳು ಓಂಖಿಂ ಗೆ  24,  ಓಆಂ ಗೆ 01   Iಅಂಖ ಗೆ  36 ವಿದ್ಯಾರ್ಥಿಗಳು ಪ್ರವೇಶಾರ್ಹತೆ ಪಡೆಯುವುದರ ಮೂಖಾಂತರ ಮಧ್ಯ ಕರ್ನಾಟಕದಲ್ಲಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅದ್ವಿತೀಯ ಫಲಿತಾಂಶ ನೀಡಿದ ಅತ್ಯುತ್ತಮ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜೆಇಇ ಅಡ್ವಾನ್ಸ್ ನಲ್ಲಿ ರಾಷ್ಟ್ರಮಟ್ಟzಲ್ಲಿ ಸತತ ಎರಡು ವರ್ಷಗಳಿಂದ ಅದ್ವಿತೀಯ ಸಾಧನೆಯೊಂದಿಗೆ    ಅತ್ಯುತ್ತಮ ರ್ಯಾಂಕ್‍ಗಳಿಸಿ ಗಮನ ಸೆಳೆದಿದ್ದ ಬೆನ್ನಲ್ಲೇ ‘ನೀಟ್’ನಲ್ಲೂ ಕೂಡ ಅಮೋಘ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿಯವರು ಅಭಿನಂದನೆಗಳನ್ನು ಸಲ್ಲಿಸಿ ವೈದ್ಯಕೀಯ ಮಹಾದಾಸೆ ಇದ್ದು ಈ ವರ್ಷ ಈಡೇರುವ ಸಾಧ್ಯತೆಗಳಿಲ್ಲದ ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಎಸ್.ಆರ್.ಎಸ್ ಕಾಲೇಜಿನಲ್ಲಿ ಪ್ರಾರಂಭವಾಗುವ ನೀಟ್ ಲಾಂಗ್‍ಟರ್ಮ್ ಕೋಚಿಂಗ್ ಉಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ ಟಿ.ಎಸ್. ಪ್ರಾಂಶುಪಾಲರಾದ ಶ್ರೀ ಗಂಗಾಧರ್ ಈ. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!