Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಫ್ಘಾನಿಸ್ತಾನದಲ್ಲಿ ಆಫ್ಘನ್ ಕರೆನ್ಸಿ ಬಳಕೆಗೆ ಮಾತ್ರ ಅವಕಾಶ ಎಂದ ತಾಲಿಬಾನಿಗಳು..!

Facebook
Twitter
Telegram
WhatsApp

ಕಾಬೂಲ್: ಆಪ್ಘಾನಿಸ್ತಾನದ ಮಾರುಕಟ್ಟೆಯಲ್ಲಿ ವ್ಯಾಪಕವಾಗಿ ಬಳಕೆಯಾಗುವುದು ಡಾಲರ್ ಕರೆನ್ಸಿ.‌ಗಡಿ ಪ್ರದೇಶದ ಜನರು ಕೂಡ ತಮ್ಮ ವ್ಯಾಪಾರ ವಹಿವಾಟಿಗೆ ಪಾಕಿಸ್ತಾನದಂತ ನೆರೆಯ ರಾಷ್ಟ್ರಗಳ ಕರೆನ್ಸಿಯನ್ನೇ ಬಳಕೆ ಮಾಡುತ್ತಾರೆ. ಆದ್ರೆ ಇದೀಗ ತಾಲಿಬಾನಿಗಳು ವಿದೇಶಿ ಕರೆನ್ಸಿ ಬಳಕೆ ಮಾಡದಂತೆ ಆಜ್ಞೆ ಮಾಡಿದ್ದಾರೆ ಎನ್ನಲಾಗಿದೆ.

ಅಲ್ಲಿನ ಮಾಧ್ಯಮಗಳೆ ಹೇಳಿರಯವ ಪ್ರಕಾರ ಆಫ್ಘನ್ ಕರೆನ್ಸಿ ಬಳಕೆಗೆ ತಾಲಿಬಾನಿಗಳು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ವಿದೇಶಿ ಕರೆನ್ಸಿ ಬಳಸಬಾರದು ಎಂದು ಹೇಳಲಾಗಿದೆಯಂತೆ. ಒಂದು ವೇಳೆ ಈ ನಿಯಮ ಮೀರಿದ್ರೆ ಕಠಿಣ ಶಿಕ್ಷೆ ನೀಡುವುದಾಗಿ ಸೂಚನೆ ನೀಡಲಾಗಿದೆಯಂತೆ.

ಆಫ್ಘಾನ್ ನಲ್ಲಿರುವ ಆರ್ಥಿಕ ಪರಿಸ್ಥಿತಿ ಪರಿಗಣಿಸಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಈ ದೇಶದ ಜನರು ತಮ್ಮ ಪ್ರತಿ ವ್ಯವಹಾರವನ್ನು ಅಪ್ಘಾನಿಸ್ತಾನದ ಕರೆನ್ಸಿಯಲ್ಲಿಯೆ ನಡೆಸಬೇಕು ಎಂಬ ನಿರ್ಣಯವನ್ನು ಜಾರಿ ಮಾಡಲಾಗಿದೆ ಎಂದು ತಾಲಿಬಾನ್ ವಕ್ತಾರರು ತಿಳಿಸಿದ್ದಾರಂತರ. ಈ ಸಂಬಂಧ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಅಫ್ಘಾನಿಸ್ತಾನದಿಂದ ಯುಎಸ್​ ಪಡೆಗಳು ಹೊರಟುಹೋದ ಬಳಿಕ ಅಲ್ಲಿ ಹಣಕಾಸು ನೆರವು ನೀಡಲು ಅಂತಾರಾಷ್ಟ್ರೀಯ ದಾನಿಗಳೂ ಹಿಂದೇಟು ಹಾಕುತ್ತಿದ್ದಾರೆ. ಎಷ್ಟೋ ಆರ್ಥಿಕ ಮೂಲಗಳು ಮುಚ್ಚಿಹೋಗಿವೆ. ಅದಕ್ಕೂ ಮಿಗಿಲಾಗಿ ಅಫ್ಘಾನಿಸ್ತಾನದಲ್ಲಿ ಇನ್ನೂ ಸ್ಥಿರತೆಯೇ ಮೂಡಿಲ್ಲ. ಒಂದಲ್ಲ  ಒಂದು ಕಡೆ ಸ್ಫೋಟ, ಪ್ರಾಣ ಹಾನಿ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!