Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿರುದ್ಯೋಗಿಗಳಿಗೆ ಸುವರ್ಣಾವಕಾಶ : ಬಾಳೆದಿಂಡಿನಿಂದ ನಾರು ಸಂಸ್ಕರಣೆ ತಾಂತ್ರಿಕ ತರಬೇತಿ ; ಅರ್ಜಿ ಸಲ್ಲಿಸಲು ಜನವರಿ 6 ಕೊನೆದಿನ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.03 : ಬಾಳೆದಿಂಡಿನಿಂದ ನಾರು ಸಂಸ್ಕರಣೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳ ತಯಾರಿಕೆಯ 5 ದಿನಗಳ ಉಚಿತ ತರಬೇತಿ ಕಾರ್ಯಾಗಾರಕ್ಕೆ ಐಐಎಸ್ಸಿ ಯಿಂದ ಅರ್ಜಿ ಅಹ್ವಾನಿಸಲಾಗಿದೆ.

ಐಐಎಸ್ಸಿಯ ಅಂಗ ಸಂಸ್ಥೆಯಾದ ಸೊಸೈಟಿ ಫಾರ್ ಇನ್ನೋವೇಷನ್ ಅಂಡ್ ಡೆವಲಪ್‍ಮೆಂಟ್ ಮತ್ತು ಧಾರವಾಡದ ಕೃಷಿವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಈ ತರಬೇತಿಯನ್ನು ಜನವರಿ ತಿಂಗಳ 8 ರಿಂದ 12 ರವರೆಗೆ ಧಾರವಾಡ ವಿವಿಯಲ್ಲಿ ಏರ್ಪಡಿಸಲಾಗಿದೆ.

ತರಬೇತಿ ಕಾರ್ಯಾಗಾರದಲ್ಲಿ ಬಾಳೆದಿಂಡಿನಿಂದ ನಾರು ಉತ್ಪಾದನೆ ಮತ್ತು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ತಾಂತ್ರಿಕ ತರಬೇತಿ ಮತ್ತು ಮಾರ್ಗದರ್ಶನ ನೀಡಲಾಗುವುದು. ಈ ತರಬೇತಿ ಕಾರ್ಯಾಗಾರಕ್ಕೆ ಚಿತ್ರದುರ್ಗ ಜಿಲ್ಲೆಯ ಬಾಳೆ ಬೆಳೆಗಾರರು,ಕುಶಲಕರ್ಮಿಗಳು, ನಿರುದ್ಯೋಗಿಗಳು, ನವೋದ್ಯಮಿಗಳು ಹಾಗೂ ಉದ್ಯಮ ಆರಂಭಿಸುವ ಇಚ್ಚೆಯುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿನ ಊಟ,ವಸತಿ ಸೇರಿದಂತೆ ಸಂಪೂರ್ಣ ಉಚಿತವಾಗಿದೆ. ಸ್ಥಳೀಯ ಜನರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6 ಅಂತಿಮ ದಿನವಾಗಿದೆ.

ಆಸಕ್ತರು ಗಣೇಶ್ ತೋಳಾರ್ (7349695100), ಕೋಟೇಶ್ ಕೊರವರ(9663364234) ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆದು ನೊಂದಾಯಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

error: Content is protected !!