Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದತ್ತಪೀಠ ಘಟನೆಯ ಕೇಸ್ ರೀ ಒಪನ್ : ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ಫುಲ್ ಗರಂ

Facebook
Twitter
Telegram
WhatsApp

ಚಿಕ್ಕಮಗಳೂರು: 2017ರಲ್ಲಿ ದತ್ತಪೀಠದಲ್ಲಿ ಏನು ಘಟನೆ ನಡೆದಿತ್ತು. ಆ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಕೇಸನ್ನು ಬಿಜೆಪಿ ಸರ್ಕಾರ ವಾಪಾಸ್ ಪಡೆದಿತ್ತು. ಇದೀಗ ಆ ಕೇಸ್ ಗೆ ಸಂಬಂಧಿಸಿದಂತೆ ಕಾರ್ಯಕರ್ತರಿಗೆ ನೋಟೀಸ್ ಬಂದಿದೆ. ಈ ಸಂಬಂಧ ಸಿಟಿ ರವಿ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ. ಹಿಂದೂಗಳನ್ನು ಜಾತಿ ಜಾತಿಯಾಗಿ ಒಡೆಯುವುದು, ಮುಸ್ಲಿಮರನ್ನು ಒಲೈಸಿಕೊಳ್ಳುವುದನ್ನು ಮಾಡುತ್ತಾ ಬರುತ್ತಿದೆ. ಸಂಘಟನೆಯನ್ನು ತುಳಿಯುವ ಉದ್ದೇಶದಿಂದ ಕೇಸನ್ನು ರೀಒಪನ್ ಮಾಡಲಾಗುತ್ತಿದೆ ಎಂದು ಸಿಟಿ ರವಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

 

ಯೋಜನಾ ಬದ್ಧವಾಗಿಯೇ ಸಂಘಟನೆಗಳನ್ನು ಮಣಿಸುತ್ತಾ ಇದ್ದಾರೆ. ನಾವೂ ಎಂದಿಗೂ ಎದೆ ಗುಂದುವುದಿಲ್ಲ. ಹೋರಾಟ ಮಾಡುತ್ತೇವೆ. ದತ್ತ ಪೀಠ ಹೋರಾಟಗಾರರ ಮೇಲಿನ ಕೇಸನ್ನು ರೀ ಓಪನ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿಯಾಗಿ ಕೇಸನ್ನು ಒಪನ್ ಮಾಡಿರುವುದು ಬಿಡಿಬಿಡಿ ಅಂತ ನನಗೆ ಅನ್ನಿಸ್ತಾ ಇಲ್ಲ. ಇವರು ಒಂದು ಯೋಜನೆ ಮಾಡಿದ್ದಾರೆ. ಆ ಯೋಜನೆಗೆ ಒಂದು ಸಂಸ್ಥೆಯನ್ನು ತೆಗೆದುಕೊಂಡು, ಆ ಮೂಲಕ ವರ್ಷಕ್ಕೆ 14-15 ಕೋಟಿ ಹಣ ನೀಡುತ್ತಿದ್ದಾರಂತೆ‌.

ಅವರ ಕೆಲಸ ಏನು ಎಂದರೆ ಸರ್ಕಾರದ ವಿರುದ್ಧ ಏನಾದರೂ ಕೆಲಸ ಬಂದರೆ ಅದನ್ನು ಡೈವರ್ಟ್ ಮಾಡುವುದು. ಹಿಂದೂ ಸಂಘಟನೆಗಳು ಕೆಲಸ ಮಾಡದಂತೆ ನೋಡಿಕೊಳ್ಳುವುದು. ಹಿಂದೂ ಸಂಘಟನೆಗಳನ್ನು ತಿಳಿಯುವುದಕ್ಕೆ ಈ ರೀತಿ ಒಂದು ಕ್ರಿಯೇಟ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಈ ಹಿಂದೆ ದಿನೇಶ್ ಅಮಿನ್ ಮಟ್ಟು ಅಂತ ಪತ್ರಕರ್ತರಿದ್ದಲ್ಲ ಅವರ ನೇತೃತ್ವದಲ್ಲಿಯೇ ಹರ್ಬಲ್ ನಕ್ಸಲರ ಆರ್ಗನೈಸರ್ ಮಾಡಿದ್ದಾರಂತೆ. ಅವರ ಕೆಲಸ ಸೋಷಿಯಲ್ ಮೀಡಿಯಾದಲ್ಲಿ ಯಾರು ಸಕ್ರೀಯವಾಗಿದ್ದಾರೆ. ಮೀಡಿಯಾದಲ್ಲಿ, ಸಾರ್ವಜನಿಕವಾಗಿ ಯಾರು ಸಕ್ರೀಯವಾಗಿದ್ದಾರೆ. ಅದನ್ನು ತುಳಿಯುವುದೇ ಅವರ ಕೆಲಸವಾಗಿದೆಯಂತೆ. ಇದನ್ನ ಕೇಳಿದ್ದೇವೆ. ನಾವೇನು ಹೆದರಿಕೊಂಡು ಕುಳಿತಿಲ್ಲ. ಎಲ್ಲವನ್ನು ಹೆದರಿಸುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!