Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಭಿಮಾನಿಗಳಿಗೆ ಮತ್ತೆ ಬೇಸರ ಮಾಡಿದ ರಾಕಿಂಗ್ ಸ್ಟಾರ್ ಯಶ್..!

---Advertisement---

ಕಳೆದ ಮೂರು ವರ್ಷಗಳಿಂದ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆಗೆ ಆಚರಿಸಿಕೊಂಡಿಲ್ಲ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಈ ವರ್ಷವಾದರೂ ಅದ್ದೂರಿಯಾಗಿ ಆಚರಿಸಬೇಕೆಂಬುದು ಫ್ಯಾನ್ಸ್ ಆಸೆಯಾಗಿತ್ತು. ಅದರಂತೆ ಖುಷಿಯಿಂದ ಕಾಯುತ್ತಿದ್ದರು. ಆದರೆ ಈ ಸಂದರ್ಭದಲ್ಲಿ ಯಶ್, ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಜನವರಿ 8.. ಸೋಮವಾರ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. 39ನೇ ವರ್ಷಕ್ಕೆ ರಾಕಿ ಬಾಯ್ ಕಾಲಿಡುತ್ತಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಾರೆ ಎಂದೇ ನಂಬಲಾಗಿತ್ತು. ಆದರೆ ಈಗ ಆ ನಿರೀಕ್ಷೆ ಸುಳ್ಳಾಗಿದೆ. ಅಭಿಮಾನಿಗಳನ್ನೆಲ್ಲಾ ಉದ್ದೇಶಿಸಿ, ಯಶ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಜನವರಿ 8. ನೀವು ನನ್ನ ಮೇಲಿಟ್ಟಿರುವ ಅಭಿಮಾನವನ್ನ ನನ್ನ ಜೊತೆ ಖುದ್ದು ವ್ಯಕ್ತಪಡಿಸಬೇಕೆಂದು ಅಪೇಕ್ಷೆ ಪಡುವ ದಿನ. ನನಗೂ ಅಷ್ಟೇ, ಜನ್ಮದಿನದ ನೆಪದಲ್ಲಿ ನಿಮ್ಮೊಂದಿಗೆ ಸಮಯ ಕಳೆಯುವ ಹಂಬಲ. ಆದರೆ ಸಿನಿಮಾದ ಕೆಲಸ ನನಗೆ ಬಿಡುವಿಲ್ಲದಂತೆ ಮಾಡಿದೆ ಅನಿವಾರ್ಯವಾಗಿ ಪ್ರಯಾಣ ಮಾಡಲೇಬೇಕಿರುವುದರಿಂದ ಈ ಜನವರಿ 8 ನಿಮಗೆ ಸಿಗಲು ಸಾಧ್ಯವಾಗುತ್ತಿಲ್ಲ. ನಿಮ್ಮಗಳ ಅಭಿಮಾನ ನನ್ನ ಅನುಪಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತದೆ ಎಂಬ ನಂಬಿಕೆ ನನ್ನದು. ಸದಾಕಾಲ ನನ್ನ ಜೊತೆ ಇರುವ ನಿಮ್ಮ ಪ್ರೀತಿ, ಅಭಿಮಾನವೇ ನನಗೆ ಹುಟ್ಟುಹಬ್ಬದ ಉಡುಗೊರೆ.

ನಿಮ್ಮ ಪ್ರೀತಿಯ ಯಶ್ ಎಂದು ಬರೆದುಕೊಂಡಿದ್ದಾರೆ.ಇನ್ನು ಅಭಿಮಾನಿಗಳು ಯಶ್ ಅವರ ಸಿನಿಮಾಗಾಗಿ ಬಹಳ ಕಾತುರದಿಂದ ಕಾಯುತ್ತಿದ್ದರು. ಅದರಂತೆ ‘ಟಾಕ್ಸಿಕ್’ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈಗಾಗಲೇ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾದ ಮೇಲೂ ಬಾರೀ ನಿರೀಕ್ಷೆ ಮೂಡಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment