Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದತ್ತಪೀಠ ಕೇಸ್ ರೀ ಓಪನ್.. ಅಷ್ಟಕ್ಕೂ 2017ರಲ್ಲಿ ಆಗಿದ್ದೇನು..? ಎ1 ಆರೋಪಿಯ ರಿಯಾಕ್ಷನ್ ಏನು..?

---Advertisement---

ದತ್ತಪೀಠ ಹೋರಾಟಗಾರರಿಗೆ ನೀಡಿದ ಸಮನ್ಸ್ ವಿಚಾರ ಕೂಡ ಸಾಕಷ್ಟು ಸದ್ದು ಮಾಡುತ್ತಾ ಇದೆ. ಚಾರ್ಜ್ ಶೀಟ್ ಸಲ್ಲಿಸಲು ಅನುಮತಿ ನೀಡಿರುವ ಸರ್ಕಾರ ಪೆಂಡಿಂಗ್ ಇರುವಂತ ಹಳೆಯ ಕೇಸ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಸೂಚನೆ ನೀಡಲಾಗಿದೆ. ಗೃಹ ಇಲಾಖೆಯಿಂದ ಈ ಸೂಚನೆ ಬಂದಿದ್ದು, ಹಳೆ ಕೇಸ್ ಗಳನ್ನು ಕ್ಲಿಯರ್ ಮಾಡಿ ಎಂದು ಸೂಚನೆ ನೀಡಲಾಗಿತ್ತು.

2017ರಲ್ಲಿ ದತ್ತಪೀಠದಲ್ಲಿ ಆಗಿದ್ದೇನು..?

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ವೇಳೆ ಗೋರಿಗಳು ಧ್ವಂಸವಾಗಿದ್ದವು. ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿದ್ದ ಗೋರಿಗಳು ದ್ವಂಸವಾಗಿದ್ದವು. 2017 ಡಿಸೆಂಬರ್ 3ರಂದು ನಡೆದ ಘಟನೆ ಇದಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 14 ಜನ ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲಾಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಕೇಸದ ದಾಖಲು ಮಾಡಲಾಗಿತ್ತು. ಐಪಿಸಿ ಸೆಕ್ಷನ್ 143, 447, 427, 298, 504, 506, 114, 353 ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಮೂರು ದಿನಗಳ ಕಾಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಯಾಗಿತ್ತು.

 

ಈ ಕೇಸಲ್ಲಿ ಎ1 ಆರೋಪಿಯಾಗಿದ್ದಂತ ತುಡ್ಕೂರು ಮಂಜು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸಹಜವಾಗಿ ಹೋರಾಟ ಅಂತ ಬಂದಾಗ ಆಕ್ರೋಶಗೊಂಡ ಮಾಲಾಧಾರಿಗಳು ಅಲ್ಲಿಂದಂತ ಗೋರಿಗಳನ್ನು ಧ್ವಂಸ ಮಾಡಲಾಗಿತ್ತು. ಅದು ಪ್ರಕರಣ ಆಗಿತ್ತು. ಆಗ ಭಜರಂಗ ದಳದ ಜಿಲ್ಲಾ ಸಂಚಾಲಕನಾಗಿದ್ದೆ ನಾನು. ಆ ಕೇಸ್ ನಲ್ಲಿ ಎ1 ಮಾಡಿದ್ದರು. ನಾನು ಜೈಲಿಗೂ ಹೋಗಿ ಬಂದಿದೆ. ಜಾಮೀನು ಕೂಡ ತೆಗೆದುಕೊಂಡಿದ್ದೆ. ಬಿಜೆಪಿ ಸರ್ಕಾರ ಇದ್ದಾಗ ಆ ಕೇಸನ್ನು ಹಿಂಪಡೆದಿದೆ ಅಂತ ನಾವೂ ಭಾವಿಸಿದ್ದೆವು. ಆದರೆ ಈಗ ಸಮನ್ಸ್ ಜಾರಿಯಾಗಿದೆ. ಕೋರ್ಟ್ ಗೆ ಹಾಜರಾಗುತ್ತೀವಿ. ಆದರೆ ಹಳೆಯ ಕೇಸ್ ಗೆ ಈಗ ಮರುಜೀವ ತಂದಿರುವುದು ಆಶ್ಚರ್ಯವಾಗಿದೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...