Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಳ್ಳೆಕೆರನಹಳ್ಳಿಯಲ್ಲಿ ಅತಿಕ್ರಮವಾಗಿ ಗುಡಿಸಲುಗಳ ನಿರ್ಮಿಸಿರುವವರ ವಿರುದ್ದ ಕಾನೂನು ಕ್ರಮಕ್ಕೆ ಮಹಾನಾಯಕ ದಲಿತ ಸೇನೆ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.05 : ಪಿಳ್ಳೆಕೆರನಹಳ್ಳಿಯಲ್ಲಿರುವ ರಿ.ಸ.ನಂ. 38/1 ರ ಜಂಟಿ ಖಾತೆಯಿರುವ ದಲಿತರ ಖಾಸಗಿ ಜಮೀನಿನಲ್ಲಿ ಮೇಲ್ಜಾತಿಯವರ ಕುಮ್ಮಕ್ಕಿನಿಂದ ಕೆಲವರು ಅತಿಕ್ರಮವಾಗಿ ಪ್ರವೇಶಿಸಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿರುವುದನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಮಹಾನಾಯಕ ದಲಿತ ಸೇನೆ ವತಿಯಿಂದ ಕಳೆದ ಎಂಟು ದಿನಗಳಿಂದ ನಡೆಯುತ್ತಿದ್ದ ಧರಣಿ ಶುಕ್ರವಾರ ಅಂತ್ಯಗೊಂಡಿತು.

ಗೋನೂರು ಗ್ರಾಮದ ವಾಸಿಗಳಾದ ಓಬಯ್ಯ, ಪಾಪಣ್ಣ, ನೀಲಮ್ಮ, ಚಂದ್ರಣ್ಣ, ಮಂಜುನಾಥ, ಗೋಪಾಲ ಇವರ ಹೆಸರುಗಳಿಗೆ ಖಾತೆಯಿರುವ ನಾಲ್ಕು ಎಕರೆ 28 ಗುಂಟೆ ಜಮೀನಿನಲ್ಲಿ ಕೆಲವರು ಗುಂಪುಕಟ್ಟಿಕೊಂಡು ಬಂದು ರಾತ್ರೋರಾತ್ರಿ ಗುಡಿಸಲುಗಳನ್ನು ನಿರ್ಮಿಸಿಕೊಂಡಿದ್ದಾರೆ. ಕೇಳಲು ಹೋದ ಜಮೀನಿನ ಮಾಲೀಕರ ಮೇಲೆ ಜಾತಿ ನಿಂದಿಸಿ ದೌರ್ಜನ್ಯವೆಸಗಿರುತ್ತಾರೆ.

ಈ ಸಂಬಂಧ ಬಡಾವಣೆ ಠಾಣೆಗೆ ದೂರು ನೀಡಲಾಗಿದ್ದು, ತಹಶೀಲ್ದಾರ್ ಹಾಗೂ ಡಿ.ವೈ.ಎಸ್ಪಿ.ರವರ ಗಮನಕ್ಕೂ ತರಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಕಂದಾಯ ಸಚಿವರು ಹಾಗೂ ಗೃಹ ಸಚಿವರಿಗೆ ಮನವಿ ಮಾಡಲಾಗಿದೆ. ಹಾಗಾಗಿ ಅತಿಕ್ರಮಣ ಮಾಡಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಂಡು ದಲಿತರಿಗೆ ಜಮೀನು ಬಿಡಿಸಿಕೊಡಬೇಕೆಂದು ಮಹಾನಾಯಕ ದಲಿತ ಸೇನೆ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಮಹಾನಾಯಕ ದಲಿತ ಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಎ.ತಾಳಿಕೆರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಳೆಯಪ್ಪ ಕೆ. ಸಾಕ್ಯ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಪ್ರದೀಪ್
ಕಾರ್ಯದರ್ಶಿ ಪೆನ್ನೇಶ್ ಕೆ. ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!