Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏನೇ ಎದುರಾದರೂ ಕುಗ್ಗಬೇಡ ಎಂದು ರಿಷಭ್ ಶೆಟ್ಟಿಗೆ ಅಭಯ ನೀಡಿದ ದೈವ

Facebook
Twitter
Telegram
WhatsApp

ಮಂಗಳೂರು: ತುಳುನಾಡಿನ ದೈವಗಳ ವಿಚಾರವನ್ನಿಟ್ಟುಕೊಂಡು ಮಾಡಿದ್ದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲೂ ಸದ್ದು ಮಾಡಿತ್ತು. ರಿಷಭ್ ಶೆಟ್ಟಿ ಅವರ ಮೇಲಿನ ನಿರೀಕ್ಷೆ ಹೆಚ್ಚಾಗಿತ್ತು. ಕಾಂತಾರ ಸಿನಿಮಾದಿಂದ ಹಲವು ಅವಾರ್ಡ್ ಗಳು ಕೂಡ ರಿಷಭ್ ಶೆಟ್ಟಿ ಅವರ ಹೆಗಲು ಸೇರಿದವು. ಇದೀಗ ಕಾಂತಾರ ಸಿನಿಮಾದ ಪ್ರಿಕ್ವೇಲ್ ಗೆ ದೈವಗಳ ಆಶೀರ್ವಾದ ಸಿಕ್ಕಿದೆ.

ಇಂದು ರಿಷಭ್ ಶೆಟ್ಟಿ, ಮಂಗಳೂರಿನ ವಜ್ರದೇಹಿ ಮಠಕ್ಕೆ ಭೇಟಿ ನೀಡಿದ್ದರು‌. ಈ ವೇಳೆ ಕಾಂತಾರಾ ಮೊದಲ ಅಧ್ಯಾಯಕ್ಕೆ ದೈವದಿಂದ ಅಭಯ ಸಿಕ್ಕಿದೆ. ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮೂಲಕ ಸೂಚನೆ ನೀಡಿದೆ. ಏನೇ ಎದುರಾದರೂ ಕುಗ್ಗಬೇಡ ಎಂದು ತಿಳಿಸಿದೆ. ದೈವದ ಆಶೀರ್ವಾದ ಸಿಕ್ಕಿದ್ದಕ್ಕೆ ರಿಷಭ್ ಶೆಟ್ಟಿ ಅಂಡ್ ಟೀಂ ಫುಲ್ ಖುಷಿಯಾಗಿದ್ದಾರೆ. ಇನ್ನು ಕಾಂತಾರ ಸಿನಿಮಾ ಮಾಡುವುದಕ್ಕೂ ಮುನ್ನವೂ ದೈವದ ಅನುಮತಿ ಪಡೆದಿದ್ದರು.

ರಿಷಭ್ ಶೆಟ್ಟಿ ಅವರು ಈ ಹಿಂದೆ ವಜ್ರದೇಹಿ ಸ್ವಾಮೀಜಿ ಭೇಟಿಯಾದ ಸಂದರ್ಭದಲ್ಲಿ ಅವರು ಈ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ವಜ್ರದೇಹಿ ಮಠದ ದೈವ ಕೋಲ ವೀಕ್ಷಿಸುವ ಇಚ್ಛೆಯನ್ನು ಹೇಳಿಕೊಂಡಿದ್ದರು. ಹೀಗಾಗಿ ಕೋಲಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಅವರು ರಿಷಬ್ ಶೆಟ್ಟಿಯನ್ನು ಆಹ್ವಾನಿಸಿದ್ದರು. ಹೀಗಾಗಿ ರಿಷಬ್ ಇದರಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ರಿಲೀಸ್ ಆದ ಮೇಲೆ ಕೋಟಿ ಕೋಟಿ ಹಣವನ್ನು ಬಾಚಿಕೊಂಡಿದೆ. ಕಾಂತಾರ ಮುಂದುವರೆದ ಭಾಗವನ್ನು ನೋಡಬೇಕೆಂಬ ಆಸೆಯನ್ನು ಪ್ರೇಕ್ಷಕರು ವ್ಯಕ್ತಪಡಿಸಿದ್ದರು. ಹೀಗಾಗಿ ಅದರ ಹಿಂದಿನ ಭಾಗವನ್ನು ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ಸಿನಿಮಾ ಪ್ರಿಕ್ವೇಲ್ ಶೂಟ್ ಆಗುತ್ತಿರುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!