Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬ್ಯಾಂಕ್ ನಿಂದ ಸಾಲ ಪಡೆದ ಆರೋಪ : ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು..!

---Advertisement---

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನ ಮ್ಯಾನೇಜರ್ ರಾಜಣ್ಣ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಅಪೇಕ್ಸ್ ಬ್ಯಾಂಕ್ ನಿಂದ ಸಾಲ ಪಡೆದ ಆರೋಪ್ ಮೇಲೆ ದೂರು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಎ1 ಆರೋಪಿಯಾಗಿದ್ದಾರೆ. ಈ ಸಂಬಂಧ 420 ಕೇಸ್ ದಾಖಲಾಗಿದೆ. ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಅಪೇಕ್ಸ್ ಬ್ಯಾಂಕ್ ನಲ್ಲಿ 2013ರಿಂದ 2017 ರವರೆಗೂ 232 ಕೋಟಿ 88 ಲಕ್ಷ ರೂಪಾಯಿ ಸಾಲ ಮಂಜೂರು ಮಾಡಲಾಗಿತ್ತು. ಆದರೆ ಈ ಸಾಲವನ್ನು ಬ್ಯಾಂಕ್ ಗೆ ವಾಪಾಸ್ ಮಾಡಿಲ್ಲ. ಇದು 2023ರ ವೇಳೆಗೆ 439 ಕೋಟಿ 7 ಲಕ್ಷ ಆಗಿದೆ. ಬ್ಯಾಂಕ್ ಗೆ ಮೋಸ ಮಾಡಿದ್ದಾರೆಂದು ಆರೋಪಿಸಿ, ದೂರು ದಾಖಲು ಮಾಡಲಾಗಿದೆ.

 

ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ಹಾಗೂ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್​ನ ಇಬ್ಬರು ಪದಾಧಿಕಾರಿಗಳ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದೆ. ಬೆಳಗಾವಿಯ ಗೋಕಾಕ್​ನ ಶುಗರ್ ಫ್ಯಾಕ್ಟರಿಯಾದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಹಾಗೂ ವಿಸ್ತರಣೆ ನಿರ್ವಹಣೆಗಾಗಿ ಸಾಲ ಪಡೆದಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment