Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿಗೆ ಕೇಂದ್ರ ಬಿಜೆಪಿ ಬಿಗ್ ಆಫರ್.. ಒಕ್ಕಲಿಗರ ಮತ, ರೈತರ ಒಲೈಕೆಗೆ ಪ್ಲ್ಯಾನ್ ನಡಿತಿದ್ಯಾ..?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಹುಮತಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಈ ಗೆಲುವನ್ನು ನಿರೀಕ್ಷೆ ಮಾಡಿರಲಿಲ್ಲ. ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಸಲು ಮೈತ್ರಿ ಮೂಲಕ ಒಂದಾಗಿದ್ದಾರೆ. ಇದರ ನಡುವೆ ಕೇಂದ್ರ ಬಿಜೆಪಿಯಿಂದ ಕುಮಾರಸ್ವಾಮಿಗೆ ಬಿಗ್ ಆಫರ್ ಬಂದಿದೆಯಂತೆ.

 

ಲೋಕಸಭಾ ಚುನಾವಣೆ ಎದುರಿಸಲು ಮೈತ್ರಿ ಮೂಲಕ ಒಂದಾಗಿದೆ. ಈಗಾಗಲೇ ಜೆಡಿಎಸ್ ಗೆ ಎಲ್ಲೆಲ್ಲಾ ಕ್ಷೇತ್ರಗಳನ್ನು ಬಿಟ್ಟುಕೊಡಬಹುದು ಎಂಬುದನ್ನು ಚರ್ಚೆ ಮಾಡಿರುವ ಬಿಜೆಪಿ, ಕುಮಾರಸ್ವಾಮಿ ಅವರಿಗೆ ಸಚಿವ ಸಂಪುಟದಲ್ಲೂ ಅವಕಾಶ ನೀಡಲು ನಿರ್ಧರಿಸಿದೆಯಂತೆ. ಸಂಕ್ರಾಂತಿ ಬಳಿಕ ಕೇಂದ್ರ ಸಚಿವ ಸಂಪುಟ ರಿ ಶಫಲ್ ಆಗಲಿದೆ. ಈ ವೇಳೆ ಕುನಾರಸ್ವಾಮಿ ಅವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಕುಮಾರಸ್ವಾಮಿಗೆ ಸ್ಥಾನ ನೀಡುತ್ತಿರುವುದರ ಹಿಂದೆ ಹಲವು ಕಾರಣಗಳಿವೆ. ಅದರಲ್ಲಿ ಮುಖ್ಯವಾಗಿ ಒಕ್ಕಲಿಗ ಮತಗಳನ್ನು ಸೆಳೆಯುವ ತಂತ್ರ ಅಡಗಿದೆ ಎನ್ನಲಾಗಿದೆ. ಜೊತೆಗೆ ಕೃಷಿ ಖಾತೆ ನೀಡುವ ಸಂಭವವಿದ್ದು, ರೈತರನ್ನು ಒಲೈಕೆ ಮಾಡುವ ತಂತ್ರ ಅಡಗಿದೆ ಎನ್ನಲಾಗಿದೆ. ಇದರ ಜೊತೆಗೆ ಡಿಕೆಶಿಗೆ ಟಕ್ಕರ್ ಕೊಡಲು ಮುಂದಾಗಿದೆ ಎನ್ನಲಾಗುತ್ತಿದೆ.

ಕೇಂದ್ರ ಸಚುವ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಚರ್ಚೆಯ ಬೆನ್ನಲ್ಲೇ ಸಿ ಟಿ ರವಿ, ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!