Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಉಲ್ಲೇಖ : ನಯನತಾರ ವಿರುದ್ಧ ಎಫ್ಐಆರ್ ದಾಖಲು..!

Facebook
Twitter
Telegram
WhatsApp

ಸಿನಿಮಾಗಳಲ್ಲಿನ ಹೇಳಿಕೆ, ತೋರಿಸುವ ವಿಚಾರ ಎಷ್ಟೋ ಸಲ ವಿವಾದಕ್ಕೆ ಈಡಾಗಿರುವ ಉದಾಹರಣೆ ಇದೆ. ಇದೀಗ ರಾಮನ ವಿಚಾರಕ್ಕೆ ‘ಅನ್ನಪೂರ್ಣಿ’ ಸಿನಿಮಾ ವಿವಾದಕ್ಕೆ ಒಳಗಾಗಿದೆ. ಅದರ ಪರಿಣಾಮವೇ ಇದೀಗ ನಟಿ ನಯನತಾರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅನ್ನಪೂರ್ಣಿ ಸಿನಿಮಾ ಒಟಿಟಿ ವೇದಿಕೆಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಹಿಂದುಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಸಿನಿಮಾದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ ಸೇರಿದಂತೆ ಹಲವು ವಿಚಾರಗಳು ಇದೆ ಎಂದು ದೂರು ನೀಡಲಾಗಿದೆ. ಹಿಂದೂ ಸಂಘಟನೆಯ ಮುಖಂಡ ರಮೇಶ್ ಸೋಲಂಕಿ ದೂರು ನೀಡಿದ್ದಾರೆ.

 

ಸಿನಿಮಾದ ನಾಯಕಿ ಹಿಜಾಬ್‌ ಧರಿಸಿ ನಮಾಜ್ ಮಾಡುವುದು. ಆಕೆಯ ಸ್ನೇಹಿತ ನಾಯಕಿಯನ್ನು ಲವ್‌ ಜಿಹಾದ್‌ಗೆ ಒತ್ತಾಯಿಸಿ ಮತಾಂತರಕ್ಕೆ ಆಮಿಶವೊಡ್ಡುವುದು ಕೂಡ ಸಿನಿಮಾದಲ್ಲಿ ಒಳಗೊಂಡಿದೆ. ಇದರ ಜೊತೆಗೆ ಭಗವಾನ್ ರಾಮ ಮತ್ತು ಆತನ ಪತ್ನಿ ಸೀತಾ ಕೂಡ ಮಾಂಸಾಹಾರಿಗಳೆನ್ನುವ ದೃಶ್ಯಗಳಿವೆ ಎಂದು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕಿ ನಯನತಾರ, ನಿರ್ದೇಶಕ ನಿಲೇಶ್ ಕೃಷ್ಣ, ನಿರ್ಮಾಪಕರಾದ ಆರ್ ರವೀಂದ್ರ,ಜಿತಿನ್ ಸೇಠಿ,ಪುನೀತ್ ಗೋಯಂಕಾ, ಝೀ ಸ್ಟುಡಿಯೋ ಸಿಬಿಒ ಹಾಗೂ ಭಾರತದ ನೆಟ್‌ಫ್ಲಿಕ್ಸ್ ಮುಖ್ಯಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ. ದೂರು ದಾಖಲಿಸಿರುವ ಬಗ್ಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ರಮೇಶ್ ಸೋಲಂಕಿ, ಈ ಕುರಿತು ಮುಂಬೈ ಪೊಲೀಸರು ಮತ್ತು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಮತ್ತು ಚಿತ್ರದ ನಿರ್ಮಾಪಕರು ಮತ್ತು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ನೆಟ್‌ಫ್ಲಿಕ್ಸ್ ಇಂಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!