Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಉಲ್ಲೇಖ : ನಯನತಾರ ವಿರುದ್ಧ ಎಫ್ಐಆರ್ ದಾಖಲು..!

---Advertisement---

ಸಿನಿಮಾಗಳಲ್ಲಿನ ಹೇಳಿಕೆ, ತೋರಿಸುವ ವಿಚಾರ ಎಷ್ಟೋ ಸಲ ವಿವಾದಕ್ಕೆ ಈಡಾಗಿರುವ ಉದಾಹರಣೆ ಇದೆ. ಇದೀಗ ರಾಮನ ವಿಚಾರಕ್ಕೆ ‘ಅನ್ನಪೂರ್ಣಿ’ ಸಿನಿಮಾ ವಿವಾದಕ್ಕೆ ಒಳಗಾಗಿದೆ. ಅದರ ಪರಿಣಾಮವೇ ಇದೀಗ ನಟಿ ನಯನತಾರ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಅನ್ನಪೂರ್ಣಿ ಸಿನಿಮಾ ಒಟಿಟಿ ವೇದಿಕೆಯಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ನೋಡಿದ ಹಿಂದುಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ. ಸಿನಿಮಾದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಹಾಗೂ ಲವ್ ಜಿಹಾದ್ ಸೇರಿದಂತೆ ಹಲವು ವಿಚಾರಗಳು ಇದೆ ಎಂದು ದೂರು ನೀಡಲಾಗಿದೆ. ಹಿಂದೂ ಸಂಘಟನೆಯ ಮುಖಂಡ ರಮೇಶ್ ಸೋಲಂಕಿ ದೂರು ನೀಡಿದ್ದಾರೆ.

 

ಸಿನಿಮಾದ ನಾಯಕಿ ಹಿಜಾಬ್‌ ಧರಿಸಿ ನಮಾಜ್ ಮಾಡುವುದು. ಆಕೆಯ ಸ್ನೇಹಿತ ನಾಯಕಿಯನ್ನು ಲವ್‌ ಜಿಹಾದ್‌ಗೆ ಒತ್ತಾಯಿಸಿ ಮತಾಂತರಕ್ಕೆ ಆಮಿಶವೊಡ್ಡುವುದು ಕೂಡ ಸಿನಿಮಾದಲ್ಲಿ ಒಳಗೊಂಡಿದೆ. ಇದರ ಜೊತೆಗೆ ಭಗವಾನ್ ರಾಮ ಮತ್ತು ಆತನ ಪತ್ನಿ ಸೀತಾ ಕೂಡ ಮಾಂಸಾಹಾರಿಗಳೆನ್ನುವ ದೃಶ್ಯಗಳಿವೆ ಎಂದು ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಾಯಕಿ ನಯನತಾರ, ನಿರ್ದೇಶಕ ನಿಲೇಶ್ ಕೃಷ್ಣ, ನಿರ್ಮಾಪಕರಾದ ಆರ್ ರವೀಂದ್ರ,ಜಿತಿನ್ ಸೇಠಿ,ಪುನೀತ್ ಗೋಯಂಕಾ, ಝೀ ಸ್ಟುಡಿಯೋ ಸಿಬಿಒ ಹಾಗೂ ಭಾರತದ ನೆಟ್‌ಫ್ಲಿಕ್ಸ್ ಮುಖ್ಯಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ. ದೂರು ದಾಖಲಿಸಿರುವ ಬಗ್ಗೆ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ರಮೇಶ್ ಸೋಲಂಕಿ, ಈ ಕುರಿತು ಮುಂಬೈ ಪೊಲೀಸರು ಮತ್ತು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವಿಸ್ ಮತ್ತು ಚಿತ್ರದ ನಿರ್ಮಾಪಕರು ಮತ್ತು ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ ನೆಟ್‌ಫ್ಲಿಕ್ಸ್ ಇಂಡಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment