Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌ಷಿಪ್ :  12 ಚಿನ್ನ, 8 ಬೆಳ್ಳಿ ಹಾಗೂ 2 ಕಂಚಿನ ಪದಕಗಳನ್ನು ಪಡೆದ ಎಸ್. ಆರ್. ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.09 : ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಸ್. ಆರ್ ಎಸ್ ಹೆರಿಟೇಜ್ ಶಾಲೆಯ ವಿದ್ಯಾರ್ಥಿಗಳು ಹೊಸದುರ್ಗದಲ್ಲಿ ಭಾನುವಾರ ನಡೆದ SAI CUP–24 ರಾಜ್ಯಮಟ್ಟದ ಮುಕ್ತ ಟೆಕ್ವಾಂಡೋ ಪಂದ್ಯಾವಳಿ  ಪಂದ್ಯಾವಳಿಯಲ್ಲಿ 12 ಚಿನ್ನದ ಪದಕ, 8 ಬೆಳ್ಳಿಯ ಪದಕ ಹಾಗೂ 2 ಕಂಚಿನ ಪದಕಗಳನ್ನು ಪಡೆದುಕೊಂಡು ಎಸ್. ಆರ್. ಎಸ್ ಹೆರಿಟೇಜ್ ಶಾಲೆಗೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ.

ಟೆಕ್ವಾಂಡೋ ಒಂದು ಕೊರಿಯಾ ದೇಶದ ಸಮರ (ಆತ್ಮರಕ್ಷಣೆ) ಕಲೆಯಾಗಿದ್ದು ಶಿಸ್ತುಬದ್ಧವಾದ ಕಾಲ್ಚಳಕ ಹಾಗೂ ಕೈಚಳಕದಿಂದ ಎದುರಾಳಿಯನ್ನು ನಿರಾಯುಧದಿಂದ ಸಮರ್ಥವಾಗಿ ಎದುರಿಸಬಹುದಾದ ಕಲೆಯಾಗಿದೆ ಹಾಗೂ ಕ್ರೀಡಾಕೂಟದಲ್ಲಿಯೂ ಸಹ ಸೇರ್ಪಡೆಯಾಗಿದೆ.
1)ರಾಜ್ಯ ಒಲಂಪಿಕ್ಸ್ ಸಂಸ್ಥೆ [KOA] . ರಾಜ್ಯ ಕ್ರೀಡಾ ಪ್ರಾಧಿಕಾರ  [SAK]
2)ರಾಷ್ಟ್ರೀಯ ಒಲಂಪಿಕ್ಸ್ ಸಂಸ್ಥೆ [IOA]ರಾಪ್ಟ್ರೀಯ ಕ್ರೀಡಾ ಪ್ರಾಧಿಕಾರ [SAI]
3)ಅಂತರ ರಾಪ್ಟ್ರೀಯ ಒಲಂಪಿಕ್ಸ್ ಕಮಿಟಿ [IOC]ಯಲ್ಲೂ ಮಾನ್ಯತೆ ಪಡೆದುಕೊಂಡಿರುವ ಏಕೈಕ ಆತ್ಮರಕ್ಷಣಾ ಕಲೆಯಾಗಿದೆ.

ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಶಾಲೆಯ ಆಡಳಿತ ಮಂಡಳಿಯವರು ಹಾಗೂ ಶಾಲಾ ಪ್ರಾಂಶುಪಾಲರು ಶುಭವನ್ನು ಕೋರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‌ಎಸ್‌ಎಲ್‌ಸಿ ಫಲಿತಾಂಶ : 625 ಕ್ಕೆ 620 ಅಂಕ ಗಳಿಸಿದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ

ಸುದ್ದಿಒನ್, ಚಿತ್ರದುರ್ಗ, ಮೇ. 09 : ನಗರದ ವಿದ್ಯಾ ವಿಕಾಸ ವಿದ್ಯಾ ಸಂಸ್ಥೆಯ, ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡ 100 ರಷ್ಟು ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.   ಈ ಬಾರಿಯ

ಬಸವ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಬೈಕ್ ರ್ಯಾಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 09  : ಸಾಂಸ್ಕøತಿಕ ನಾಯಕ ವಿಶ್ವಗುರು ಬಸವೇಶ್ವರರ ಜಯಂತಿ ಅಂಗವಾಗಿ ವೀರಶೈವ ಸಮಾಜದಿಂದ ಗುರುವಾರ

ಮುಂಗಾರು, ಸಂಭಾವ್ಯ ಪ್ರಕೃತಿ ವಿಕೋಪ ನಿಯಂತ್ರಣ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ : ಮೇ 09 : ಶೀಘ್ರದಲ್ಲಿ ಮುಂಗಾರು ಆರಂಭಗೊಳ್ಳುವ ನಿರೀಕ್ಷೆ ಇದ್ದು, ಜಿಲ್ಲೆಯಲ್ಲಿ ಸಂಭಾವ್ಯ ಪ್ರಕೃತಿ ವಿಕೋಪಗಳ ನಿಯಂತ್ರಣಕ್ಕೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸದಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ

error: Content is protected !!