ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ತುಮಕೂರು: ನಾಳೆ 28 ಸಚಿವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 28 ಕ್ಷೇತ್ರಗಳ ಆಯ್ಕೆಯ ಬಗ್ಗೆ ಅಭಿಪ್ರಾಯವನ್ನು ಕೇಳುವುದಕ್ಕೆ, ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಗೆಲ್ಲುವಂತ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೆ ತೀರ್ಮಾನ ಮಾಡಲು ಪೂರ್ವಕವಾಗಿ ಕರೆದಿರುವ ಸಭೆ ಇದು ಎಂದಿದ್ದಾರೆ
ಇದೇ ವೇಳೆ ತುಮಕೂರು ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ, ನಾನು ಮೊದಲು ಸ್ಪರ್ಧೆ ಮಾಡಬೇಕು ಅಂತ ಇದ್ದೆ. ಆದರೆ ನಾನು ಇನ್ಯಾವ ಚುನಾವಣೆಯಲ್ಲೂ ನಿಲ್ಲಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಅವರು ಹೇಳಿದರೆ ಯಾರಾದರೂ ಸಚಿವರು ನಿಲ್ಲಬೇಕಾದ ಅಗತ್ಯತೆ ಬಿದ್ದರೆ ನಿಲ್ಲಬೇಕಾಗುತ್ತದೆ ಎಂದು ಹೇಳಿದ್ದಾರೆ. ಅದರಲ್ಲಿ ಯಾರನ್ನು ಕಣಕ್ಕೆ ಇಳಿಸುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.
ಇನ್ನು ಯಾವ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಫೈನಲ್ ಆಗಿಲ್ಲ. ನಮ್ಮ ಅಧ್ಯಕ್ಷರು ಒಂದು ಸಭೆಯಲ್ಲಿ ಹೇಳಿದ್ದಾರೆ. ಶಿವಮೊಗ್ಗಕ್ಕೆ ಶಿವಣ್ಣ ಅವರನ್ನು ನಿಲ್ಲಿಸಬೇಕು ಅಂತ. ಅವರ ಕುಟುಂಬದ ಗೀತಮ್ಮ ಅವರನ್ನು ನಿಲ್ಲಿಸುತ್ತೀವಿ ಅಂತ ಹೇಳಿದ್ದಾರೆ. ಅದೊಂದು ಅಭ್ಯರ್ಥಿಯ ಫೈನಲ್ ಮಾಡಿದ್ದಾರೆ ಎಂದು ಅಣ್ಣಾವ್ರ ಕುಟುಂಬಕ್ಕೆ ಟಿಕೆಟ್ ಮೀಸಲಿಟ್ಟಿರುವ ಬಗ್ಗೆಯೂ ತಿಳಿಸಿದ್ದಾರೆ.
ಇದೆ ವೇಳೆ ಮೂರು ಡಿಸಿಎಂ ಬೇಡಿಕೆ ಬಗ್ಗೆ ಮಾತನಾಡಿ, ಅಧ್ಯಕ್ಷರು ಹೇಳಿದ ಮೇಲೆ ಅವರ ನಿರ್ಧಾರವೇ ಅಂತಿಮ. ಚುನಾವಣಾ ಹಿತ ದೃಷ್ಟಿಯಲ್ಲಿ ಆದರೆ ಒಳ್ಳೆಯದು. ಮಾಡಲ್ಲ ಎಂದರೆ ಬೇಡ ಬಿಡಿ. ಪಕ್ಷಕ್ಕಾಗಿ ಹೇಳುತ್ತೀನೇ ಹೊರತು ನನ್ನ ವೈಯಕ್ತಿಕ ಅಲ್ಲ. ಕೆಲವು ರಾಜ್ಯದಲ್ಲೂ ಮೂರು ಡಿಸಿಎಂ ಮಾಡಿದ್ದಾರೆ. ಸುರ್ಜೆವಾಲ್ ಅವರು ಬಂದಾಗಲೂ ಸಚಿವರು ಮನವಿ ಮಾಡಿದ್ದಾರೆಂದು ಮೂರು ಡಿಸಿಎಂ ಹುದ್ದೆಗಳ ವಿಚಾರವಾಗಿ ಮಾತನಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್