Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ? ಸಚಿವ ರಾಜಣ್ಣ ಹೇಳಿದ್ದೇನು ?

Facebook
Twitter
Telegram
WhatsApp

 

 

ತುಮಕೂರು: ನಾಳೆ 28 ಸಚಿವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 28 ಕ್ಷೇತ್ರಗಳ ಆಯ್ಕೆಯ ಬಗ್ಗೆ ಅಭಿಪ್ರಾಯವನ್ನು ಕೇಳುವುದಕ್ಕೆ, ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಗೆಲ್ಲುವಂತ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೆ ತೀರ್ಮಾನ ಮಾಡಲು ಪೂರ್ವಕವಾಗಿ ಕರೆದಿರುವ ಸಭೆ ಇದು ಎಂದಿದ್ದಾರೆ

ಇದೇ ವೇಳೆ ತುಮಕೂರು ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ, ನಾನು ಮೊದಲು ಸ್ಪರ್ಧೆ ಮಾಡಬೇಕು ಅಂತ ಇದ್ದೆ. ಆದರೆ ನಾನು ಇನ್ಯಾವ ಚುನಾವಣೆಯಲ್ಲೂ ನಿಲ್ಲಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಅವರು ಹೇಳಿದರೆ ಯಾರಾದರೂ ಸಚಿವರು ನಿಲ್ಲಬೇಕಾದ ಅಗತ್ಯತೆ ಬಿದ್ದರೆ ನಿಲ್ಲಬೇಕಾಗುತ್ತದೆ ಎಂದು ಹೇಳಿದ್ದಾರೆ‌. ಅದರಲ್ಲಿ ಯಾರನ್ನು ಕಣಕ್ಕೆ ಇಳಿಸುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಯಾವ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಫೈನಲ್ ಆಗಿಲ್ಲ. ನಮ್ಮ ಅಧ್ಯಕ್ಷರು ಒಂದು ಸಭೆಯಲ್ಲಿ ಹೇಳಿದ್ದಾರೆ. ಶಿವಮೊಗ್ಗಕ್ಕೆ ಶಿವಣ್ಣ ಅವರನ್ನು ನಿಲ್ಲಿಸಬೇಕು ಅಂತ. ಅವರ ಕುಟುಂಬದ ಗೀತಮ್ಮ ಅವರನ್ನು ನಿಲ್ಲಿಸುತ್ತೀವಿ ಅಂತ ಹೇಳಿದ್ದಾರೆ. ಅದೊಂದು ಅಭ್ಯರ್ಥಿಯ ಫೈನಲ್ ಮಾಡಿದ್ದಾರೆ ಎಂದು ಅಣ್ಣಾವ್ರ ಕುಟುಂಬಕ್ಕೆ ಟಿಕೆಟ್ ಮೀಸಲಿಟ್ಟಿರುವ ಬಗ್ಗೆಯೂ ತಿಳಿಸಿದ್ದಾರೆ.

ಇದೆ ವೇಳೆ ಮೂರು ಡಿಸಿಎಂ ಬೇಡಿಕೆ ಬಗ್ಗೆ ಮಾತನಾಡಿ, ಅಧ್ಯಕ್ಷರು ಹೇಳಿದ ಮೇಲೆ ಅವರ ನಿರ್ಧಾರವೇ ಅಂತಿಮ. ಚುನಾವಣಾ ಹಿತ ದೃಷ್ಟಿಯಲ್ಲಿ ಆದರೆ ಒಳ್ಳೆಯದು. ಮಾಡಲ್ಲ ಎಂದರೆ ಬೇಡ ಬಿಡಿ. ಪಕ್ಷಕ್ಕಾಗಿ ಹೇಳುತ್ತೀನೇ ಹೊರತು ನನ್ನ ವೈಯಕ್ತಿಕ ಅಲ್ಲ. ಕೆಲವು ರಾಜ್ಯದಲ್ಲೂ ಮೂರು ಡಿಸಿಎಂ ಮಾಡಿದ್ದಾರೆ. ಸುರ್ಜೆವಾಲ್ ಅವರು ಬಂದಾಗಲೂ ಸಚಿವರು ಮನವಿ ಮಾಡಿದ್ದಾರೆಂದು ಮೂರು ಡಿಸಿಎಂ ಹುದ್ದೆಗಳ ವಿಚಾರವಾಗಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ವಾಸ ಇರುವವರೆಗೂ ವಿಶ್ವಾಸ ಕಳೆದುಕೊಳ್ಳಬೇಡಿ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

    ಸುದ್ದಿಒನ್ : ಶ್ವಾಸ ಇರುವವರಿಗೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಮಾಲ್ಡೀವ್ಸ್ ದೇಶದ ವಿಲ್ಲಾ ನೌಟೀಕ ಪ್ಯಾರಡೇಸ್ ದ್ವೀಪದಲ್ಲಿ ಶುಕ್ರವಾರ ನಡೆದ ವಿಶ್ವ

ಡಿ.ಕೆಂಪಣ್ಣನವರು ತಮ್ಮ ಜೀವಿತಾವಧಿಯ ಕೊನೆಯವರೆಗೂ ಭ್ರಷ್ಠಾಚಾರದ ವಿರುದ್ಧ ಹೋರಾಡಿದರು : ಕೆ.ಮಲ್ಲೇಶಪ್ಪ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣನವರ ನಿಧನಕ್ಕೆ ಜಿಲ್ಲಾ ಗುತ್ತಿಗೆದಾರರ ಸಂಘದಿಂದ

ಶಾಸಕ ಮುನಿರತ್ನ ವಿರುದ್ಧ ದೌರ್ಜನ್ಯ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸಿ : ಎಸ್.ಜಯಣ್ಣ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.20 : ಗುತ್ತಿಗೆದಾರನನ್ನು ಮನೆಗೆ ಕರೆಸಿಕೊಂಡು ಲಂಚಕ್ಕೆ ಬೇಡಿಕೆಯಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬೆಂಗಳೂರು ರಾಜರಾಜೇಶ್ವರಿ

error: Content is protected !!