Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಯೋಧ್ಯೆಯಲ್ಲಿ ರಮಾನಂದ ಸಂಪ್ರದಾಯದ ಪೂಜೆಗೆ ವಿರೋಧ : ಶಂಕರಚಾರ್ಯ ಪೀಠದ ವಾದವೇನು..?

Facebook
Twitter
Telegram
WhatsApp

 

 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿದೆ. ಈ ದಿನಕ್ಕಾಗಿಯೇ ದೇಶದ ಕೋಟ್ಯಾಂತರ ಮಂದಿ ಕಾಯುತ್ತಿದ್ದಾರೆ. ರಾಮನ ಭಕ್ತರು ರಾಮನನ್ನು ಕಣ್ತುಂಬಿಕೊಳ್ಳಲು, ಅಯೋಧ್ಯೆಗೆ ಹೊರಡಲು ಸಜ್ಜಾಗುತ್ತಿದ್ದಾರೆ. ದೇಶದ ಮೂಲೆ ಮೂಲೆಯಿಂದಾನೂ ಅಂದು ಅಯೋಧ್ಯೆಗೆ ಭಕ್ತರು ಬರುತ್ತಾರೆ. ರಾಮ್ ಲಲ್ಲಾ ಮೂರ್ತಿಯ ಪ್ರತಿಷ್ಟಾಪನೆಯಾಗಲಿದೆ. ರಮಾನಂದ ಸಂಪ್ರದಾಯದಂತೆ ರಾಮ್ ಲಲ್ಲಾ ಪ್ರತಿಷ್ಠಾಪನೆ ಮಾಡಲು, ರಾಮಜನ್ಮ ಭೂಮಿ ಟ್ರಸ್ಟ್ ನಿರ್ಧಾರ ಮಾಡಿದೆ. ಇದೀಗ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ದೇಶದ ಶಂಕರಾಚಾರ್ಯ ಪೀಠದ ಸ್ಚಾಮಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಶಂಕರಾಚಾರ್ಯರ ನಾಲ್ಕು ಪೀಠಗಳ ಪೈಕಿ ಮೂರು ಪೀಠಗಳು ರಮಾನಂದ ಸಂಪ್ರದಾಯದಂತೆ ಪ್ರತಿಷ್ಠಾಪನೆ ಮಾಡಲು ವಿರೋಧ ವ್ಯಕ್ತ ಪಡಿಸುತ್ತಿದೆ. ಆದರೆ ಶೃಂಗೇರಿ ಶಾರದಾ ಪೀಠದ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇವೆ ಎಂದಿದ್ದಾರೆ. ನಾವೂ ಪ್ರಧಾನಿ ಮೋದಿ ವಿರೋಧಿಗಳಲ್ಲ. ಧರ್ಮದ ವಿರುದ್ಧವಾಗಿ ರಾಮ್ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯಾಗಬಾರದು. ರಮಾನಂದ ಸಂಪ್ರದಾಯದ ಪ್ರಕಾರ ಮಾಡುವುದಾದರೇ ಚಂಪತ್ ರಾಯ್, ನೃಪೇಂದ್ರ ಮಿಶ್ರಾ ಟ್ರಸ್ಟ್ ನ ಸ್ಥಾನಗಳಿಗೆ ರಾಜೀನಾಮೆ ನೀಡಲಿ ಎಂದು ಉತ್ತರಾಖಂಡ ಶಂಕರಾಚಾರ್ಯ ಪೀಠದ ಅವಿಮುಕ್ತೇಶ್ವರಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ‌.

ಪುರಿಯ ಶಂಕರಾಚಾರ್ಯ ಪೀಠದ ನಿಶ್ವಲಾನಂದ ಸ್ವಾಮೀಜಿ ಕೂಡ ಪ್ರಾಣ ಪ್ರತಿಷ್ಠಾಪನೆಗೆ ಗೈರಾಗಲಿದ್ದಾರೆ. ನಮಗೆ ಮಂದಿರ ಲೋಕಾರ್ಪಣೆಗೆ ಆಹ್ವಾನ ಬಂದಿದೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ‌ನಾವು ಭಾಗಿಯಾಗಲ್ಲ. ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿಲ್ಲ. ಇದಕ್ಕೆ ನಮ್ಮ ಸಹಮತಿ ಇಲ್ಲ. ಶಾಸ್ತ್ರ, ಧಾರ್ಮಿಕ ವಿಧಿ ವಿಧಾನಗಳು ಸರಿಯಾಗಿ ನಡೆಯಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!