Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗದಿಂದ ಅಯೋಧ್ಯೆಗೆ ಸೈಕಲ್ ಜಾಥಾ ಹೊರಟ ಯುವಕರು : ಸಾಥ್ ನೀಡಿದ ಉದ್ಯಮಿ ಪ್ರದೀಪ್

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ.11 : ಜನವರಿ 22 ರಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ದೇಶದಾದ್ಯಂತ ಸಂಭ್ರಮ ಮನೆ ಮಾಡಿದೆ. ಇದೀಗ ಇಬ್ಬರು ಯುವಕರು ಜಿಲ್ಲೆಯಿಂದ ಅಯೋಧ್ಯೆಗೆ ಸೈಕಲ್ ಜಾಥಾ ಆರಂಭಿಸಿದ್ದಾರೆ.  ಹೊಸದುರ್ಗದ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಜಾಥಾ ಆರಂಭಿಸಿದರು.

 

ಹೊಸದುರ್ಗದ ಶರಣಪ್ಪ ಮತ್ತು ದಯಾನಿಧಿ ಅಯೋಧ್ಯೆಗೆ ಸೈಕಲ್ ಜಾಥಾ ಹೊರಟಿರುವ ಯುವಕರು. ಹೊಸದುರ್ಗದಿಂದ ಹೊರಟು ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆಗೆ ತೆರಳಲು ಸೈಕಲ್ ಜಾಥಾ ಮೂಲಕ ಇಬ್ಬರು ಯುವಕರು ಪ್ರಯಾಣ ಬೆಳೆಸಿದರು.

ಸೈಕಲ್ ಜಾತಕ್ಕೆ ಚಾಲನೆ ನೀಡಿ ಮಾತನಾಡಿದ ಖ್ಯಾತ ಉದ್ಯಮಿ,  ಸದ್ಗುರು ಆಯುರ್ವೇದಿಕ್ ಉತ್ಪನ್ನಗಳ ಮಾಲೀಕ ಡಿ.ಎಸ್.ಪ್ರದೀಪ್, ಮಾತನಾಡಿ, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಯುವಕರಲ್ಲಿ ರಾಷ್ಟ್ರಪ್ರೇಮದ ಜಾಗೃತಿಯನ್ನು ಮೂಡಿಸಿದ ‘ಜೈ ಶ್ರೀರಾಮ್’ ಘೋಷ ವಾಕ್ಯ ಇಂದು ರಾಷ್ಟ್ರಭಕ್ತ ಪೀಳಿಗೆಯ ಉಗಮಕ್ಕೆ ಕಾರಣವಾಗಿದೆ. ರಾಮ ರಾಜ್ಯ ಎಂದರೆ ನೆಮ್ಮದಿ, ಶಾಂತಿಯಿಂದ ಬದುಕುವುದು. ರಾಮ ಎಂದರೆ ರಾಷ್ಟ್ರ, ಶ್ರೀರಾಮನ ರಾಷ್ಟ್ರಭಕ್ತರಿಂದ ಭಾರತಕ್ಕೆ ಉತ್ತಮ ಭವಿಷ್ಯವಿದೆ’ ಎಂದು ಹೇಳಿದರು. ಈ ವೇಳೆ ಅವರು ಅಯೋಧ್ಯೆಗೆ ಹೊರಟ ಯಾತ್ರಾರ್ಥಿಗಳಿಗೆ ಪ್ರಯಾಣಕ್ಕೆ ಬೇಕಾದ ಎಲ್ಲಾ ವಿಧದ ಪರಿಕರಗಳನ್ನು ಸದ್ಗುರು ಆಯುರ್ವೇದ ಸಂಸ್ಥೆಯ ವತಿಯಿಂದ ಉದ್ಯಮಿ ಪ್ರದೀಪ್ ಅವರು ನೀಡಿದರು.

ಸೈಕಲ್ ಜಾಥಾ ಹೊರಡುವ ಸಂದರ್ಭದಲ್ಲಿ ನೆರೆದಿದ್ದ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷವಾಕ್ಯ ಕೂಗುತ್ತಾ ಯಾತ್ರಾರ್ಥಿಗಳಿಗೆ ಉತ್ಸಾಹ ತುಂಬಿದರು. ಈ ವೇಳೆ
ಸಮಾಜ ಸೇವಕ ತುಂಬಿನಕೆರೆ ಬಸವರಾಜ್, ಪ್ರಕಾಶ್, ಹಿಂದೂ ಕಾರ್ಯಕರ್ತರಾದ ಸಿದ್ದೇಶ್, ಕಾಶಿ, ಆಕಾಶ್, ಅಕ್ಷಯ್, ಮನು ಮುಂತಾದವರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!