Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ದಾವಣಗೆರೆ BSNL ಗೆ ಬಿಸಿ ಮುಟ್ಟಿಸಿದ ಗ್ರಾಹಕರ ವ್ಯಾಜ್ಯಗಳ ಆಯೋಗ : ಪರಿಹಾರ ನೀಡಲು ಆದೇಶ

---Advertisement---

ದಾವಣಗೆರೆ ಜ.11: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಬಿಎಸ್‌ಎನ್‌ಎಲ್ ಸ್ಥಿರ ದೂರವಾಣಿ ಸೇವೆಯನ್ನು ಸರಿಯಾಗಿ ನೀಡದಿರುವ ಕಾರಣಕ್ಕೆ ಮಾನಸಿಕ ವ್ಯಥೆಗೆ ರೂ. 10 ಸಾವಿರ, ಪರಿಹಾರವಾಗಿ ರೂ.5 ಸಾವಿರ ಹಾಗೂ ಠೇವಣಿಗೆ ಶೇ 18 ರ ವಾರ್ಷಿಕ ಬಡ್ಡಿದರದಲ್ಲಿ 2020 ರಿಂದ ಮರು ಸಂದಾಯ ಮಾಡಲು ಆದೇಶಿಸಿದೆ.

ದಾವಣಗೆರೆ ನಗರದ ತರಳಬಾಳು ಬಡಾವಣೆ 8 ಕ್ರಾಸ್ ಕಲ್ಲೇಶ್ವರ ನಿಲಯದಲ್ಲಿ ವಾಸಿಸುವ ನಿವೃತ್ತ ಶಿಕ್ಷಕರಾದ ಎ.ಜಿ.ವೀರೇಶ್ ಅವರು ಬಿ.ಎಸ್.ಎನ್.ಎಲ್ ಸ್ಥಿರ ದೂರವಾಣಿ 222544 ಹೊಂದಿದ್ದು ಇದು ಪದೇ ಪದೆ ದುರಸ್ಥಿಗೆ ಒಳಗಾಗಿ ಸಕಾಲದಲ್ಲಿ ಸೇವೆ ಸಿಗದ ಕಾರಣ ಹಲವು ಭಾರಿ ಬಿಎಸ್‌ಎನ್‌ಎಲ್ ಕಚೇರಿಗೆ ದೂರು ನೀಡಿದ್ದರೂ ಸಹ ಗುಣಮಟ್ಟದ ಸೇವೆ ಸಿಗದ ಕಾರಣ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಈ ದೂರವಾಣಿ 2020-23ರ ಅವಧಿಯಲ್ಲಿ ಸರಿಯಾಗಿ ಸೇವೆಯನ್ನು ನೀಡಿರುವುದಿಲ್ಲವೆಂದು ಹಾಗೂ ಆಗಲೋ-ಈಗಲೋ ಒಮ್ಮೊಮ್ಮೆ ದೂರವಾಣಿ ಕರೆಗಳು ಬರುತ್ತಿದ್ದರೂ ಕೂಡ ಒಳಬರುವ ಕರೆಗಳು ವ್ಯವಸ್ಥಿತವಾಗಿ ಕೇಳಿಬರುತ್ತಿರಲ್ಲಿಲ್ಲ. ಈ ಬಗ್ಗೆ ಹಲವಾರು ಬಾರಿ ಮೌಖಿಕವಾಗಿ ಮತ್ತು ಲಿಖಿತವಾಗಿ ಬಿಎಸ್‌ಎನ್‌ಎಲ್‌ಗೆ ಮನವಿ ಮಾಡಿದರೂ ಪರಿಸ್ಥತಿ ಸುಧಾರಣೆ ಕಾಣಲಿಲ್ಲ, ಕಚೇರಿಗೆ ಭೇಟಿ ನೀಡಿ ದೂರು ನೀಡಲು ಹೋದಾಗ ಒಂದು ಟೇಬಲ್‌ನಿಂದ ಇನ್ನೊಂದು ಟೇಬಲ್‌ಗೆ ವರ್ಗಾಹಿಸಿ ಯಾವೊಬ್ಬ ಅಧಿಕಾರಿಯು ತಮ್ಮ ಅಹವಾಲಿಗೆ ಕಿವಿಗೊಡಲಿಲ್ಲ.

ಬಿಎಸ್‌ಎನ್‌ಎಲ್ ಕಾಪರ್ ಮಾರ್ಗವಿದ್ದುದರಿಂದ ಪದೇ ಪದೇ ಮಾರ್ಗ ಕಡಿತವಾಗುತ್ತದೆ. ಇದನ್ನು ಫೈಬರ್ ಮಾರ್ಗಕ್ಕೆ ಬದಲಾಯಿಸಿಕೊಳ್ಳಬೇಕೆಂದು ನಿವೃತ್ತ ಶಿಕ್ಷಕರಾದ ಎ.ಜಿ.ವೀರೇಶ್ ರವರಿಗೆ ಹಲವು ಭಾರಿ ಮೌಖಿಕ ಹಾಗೂ ಪತ್ರ ಮುಖೇನ ತಿಳಿಸಲಾಗಿದೆ. ಈ ಬಡಾವಣೆಯಲ್ಲಿ ಎಲ್ಲರೂ ಫೈಬರ್ ಮಾರ್ಗಕ್ಕೆ ಬದದಲಾಯಿಸಿಕೊಂಡಿದ್ದು ಅರ್ಜಿದಾರರು ಮಾತ್ರ ಕಾಪರ್ ಲೈನ್ ಹೊಂದಿದ್ದು ದುರಸ್ಥಿ ದುಬಾರಿಯಾಗಿರುತ್ತದೆ ಎಂದು ಬಿಎಸ್‌ಎನ್‌ಎಲ್ ಸಮರ್ಥಿಸಿಕೊಂಡಿದೆ.

ಆಯೋಗವು ಗ್ರಾಹಕ ಸಂರಕ್ಷಣಾ ಅಧಿನಿಯಮ 2019ರ ಕಲಂ-35ರ ಅಡಿಯಲ್ಲಿ ಸಲ್ಲಿಸಿರುವ ದೂರನ್ನು ಭಾಗಶಃ ಪುರಸ್ಕರಿಸಿ ಸೇವಾ ನ್ಯೂನ್ಯತೆಯನ್ನು ಪರಿಗಣಿಸಿ ಗ್ರಾಹಕರಿಗೆ 30 ದಿನಗಳೊಳಗಾಗಿ ಪರಿಹಾರದ ಮೊತ್ತವನ್ನು ಪಾವತಿಸುವ ಜೊತೆಗೆ ಒಳ ಹೋಗುವ ಮತ್ತು ಹೊರ ಹೋಗುವ ಕರೆಗಳಿಗೆ ಯಾವುದೇ ಅಡೆತಡೆ ಇಲ್ಲದೆ ಸೇವೆ ಒದಗಿಸಲು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರದ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ ಮತ್ತು ಮಹಿಳಾ ಸದಸ್ಯೆ ಗೀತಾ.ಬಿ.ಯು ಇವರು ಆದೇಶಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment