Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

240 ಹೊಸದಾಗಿ ದಾಖಲಾದ ಕೊರೊನಾ ಕೇಸ್ : ಒಂದು ಸಾವು

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಪ್ರತಿದಿನ ನಡೆಸುವ ಪರೀಕ್ಷೆಯಲ್ಲಿ ಇಂದು 240 ಹೊಸ ಕೇಸ್ ದಾಖಲಾಗಿವೆ. ಈ ಮೂಲಕ 993 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ.

ಕಳೆದ 24 ಗಂಟೆಯಲ್ಲಿ 6223 RTPCR ಟೆಸ್ಟ್ ಮಾಡಲಾಗಿದ್ದು, 792 RAT ಟೆಸ್ಟ್ ಮಾಡಲಾಗಿದೆ. ಎಲ್ಲಾ ಸೇರಿ 7015 ಜನರಿಗೆ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 240 ಜನರಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಪಾಸಿಟಿವ್ ರೇಟ್ ಕೂಡ 3.42 ಇದೆ. 937 ಜನ ಹೋಂ ಐಸೋಲೇಷನ್ ಇದ್ದರೆ, 8 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಒಂದು ಸಾವಾಗಿದ್ದು, 220 ಜನ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೊದಲೆಲ್ಲಾ ಕೊರೊನಾ ಬಂದಿದೆ ಎಂದರೆ ಜನ ಮೂರು ಮಾರು ದೂರ ಓಡುತ್ತಿದ್ದರು. ಅದರಲ್ಲೂ ಕೊರೊನಾದಿಂದ ಸಾವನ್ನಪ್ಪಿದರೆ ಅವರ ಅಂತ್ಯಕ್ರಿಯೆ ಮಾಡುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ಬಾರಿ ಕೊರೊನಾದಿಂದ ಸಾವನ್ನಪ್ಪಿದವರಿಗೆ ಅಂತ್ಯಕ್ರಿಯೆ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಸ್ಮಶಾನ, ರುದ್ರಭೂಮಿ, ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲು ಸೂಚನೆ ನೀಡಿದೆ. ಆದರೆ ಅದರ ಜೊತೆಗೆ ಸುರಕ್ಷತೆಯನ್ನು ತೆಗೆದುಕೊಳ್ಳಲು ಆದೇಶಿಸಿದೆ. ಮಾಸ್ಕ್, ಗ್ಲೌಸ್, ಪಿಪಿಇ ಕಿಟ್ ಧರಿಸಿ ಅಂತ್ಯ ಸಂಸ್ಕಾರ ಮಾಡಲು ತಿಳಿಸಿದೆ. ಈ ಸಂಬಂಧ ಬಿಬಿಎಂಪಿ ಸುತ್ತೋಲೆಯನ್ನು ಹೊರಡಿಸಿದೆ. ರಾಜ್ಯದಲ್ಲಿ ಈಗಾಗಲೇ ಕೊರೊನಾದಿಂದಾಗಿ 26 ಮಂದಿ ಸಾವನ್ನಪ್ಪಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣ ದಾಖಲಾಗುತ್ತಲೆ ಇದೆ. ಇದರ ಜೊತೆಗೆ ದಿನಕ್ಕೆ ಒಬ್ಬರು, ಇಬ್ಬರಂತೆ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಜನ ಕೂಡ ಎಚ್ಚರಿಕೆಯಿಂದ ಇದ್ದು, ಸುರಕ್ಷತೆಯನ್ನ ತೆಗೆದುಕೊಳ್ಳಬೇಕಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!