ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೊಪ್ಪಳ: ಲೋಕಸಭಾ ಚುನಾವಣೆಗೆ ಈಗಾಗಲೇ ಪಕ್ಷಗಳು ಸಿದ್ದತೆ ನಡೆಸುತ್ತಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಲೋಕಸಭಾ ಅಖಾಡಕ್ಕೆ ನುಗ್ಗುತ್ತಿದೆ. ಕಾಂಗ್ರೆಸ್ ಪೈಪೋಟಿ ಕೊಡಲು ಸದ್ದು ಮಾಡುತ್ತಿದೆ. ಇದರ ನಡುವೆ ಜನಾರ್ದನ ರೆಡ್ಡಿ ಪಕ್ಷ ಸದ್ದು ಮಾಡುತ್ತಿದೆ. ಮತ್ತೆ ಬಿಜೆಪಿಗೆ ಜನಾರ್ದನ ರೆಡ್ಡಿ ಹೋಗುತ್ತಾರೆ ಎಂಬ ಮಾತಿದೆ. ಇದೆಲ್ಲದ್ದಕ್ಕೂ ಜನಾರ್ದನ ರೆಡ್ಡಿ ಉತ್ತರ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಶಾಸಕ, ಜನಾರ್ದನ ರೆಡ್ಡಿ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ ಕ್ಷೇತ್ರದಿಂದ ಐದು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತೇವೆ. ನಾನು ಈಗಾಗಲೇ ಹೇಳಿದ್ದೇನೆ. ಮುಂಬರುವ ದಿನಗಳಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚು ಹೋರಾಟ ಮಾಡುತ್ತದೆ. ಎಲ್ಲಿ ಹಿಂದುಳಿದ ಪ್ರದೇಶಗಳಿವೆಯೋ ಅಲ್ಲಿ ಜನಾರ್ದನ ರೆಡ್ಡಿ ಹಾಗೂ ಪಕ್ಷ ಇರುತ್ತದೆ ಎಂದಿದ್ದಾರೆ.
ಇದೆ ವೇಳೆ ಬಿಜೆಪಿಗೆ ಮರಳಿ ಹೋಗುತ್ತಾರಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ನನಗೆ ಮುಗಿದು ಹೋದ ಅಧ್ಯಾಯ. ನಾನು ಈ ಹಿಂದೆಯೂ ಹೇಳಿದ್ದೀನಿ. ಆ ವಿಚಾರವನ್ನು ಈಗಲೂ ನಾನು ಸ್ಪಷ್ಟಪಡಿಸುತ್ತಿದ್ದೀನಿ. ನಾನು ಶ್ರೀರಾಮುಲು ಜೊತೆಗೆ ಮಾತನಾಡಿಯೇ ಒಂದು ವರ್ಷವಾಗಿದೆ. ಅವರಿಗೂ ನನಗೂ ವೈಯಕ್ತಿಕವಾಗಿ ಆದರೂ ಸರಿ, ರಾಜಕೀಯವಾಗಿ ಆದರೂ ನಾನು ಅವರ ಜೊತೆಗೆ ಸಂಪರ್ಕದಲ್ಲಿ ಇಲ್ಲ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಪರವಾಗಿ ನಾನು ಹೋರಾಟ ಮಾಡುತ್ತೇನೆ ಎಂದು ಶಾಸಕ ಜನಾರ್ದನ ರೆಡ್ಡಿ ಸ್ಪಷ್ಟ ಪಡಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್