Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಿಯಾಂಕ ಗಾಂಧಿ ಕರ್ನಾಟಕದಲ್ಲಿ ನಿಲ್ಲುತ್ತಾರಾ..? ಮುದ್ದಹನುಮೇಗೌಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ

ಸಚಿವ ಪರಮೇಶ್ವರ್
---Advertisement---

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ತಯಾರಿ ನಡೆಯುತ್ತಿದ್ದು, ಪ್ರಿಯಾಂಕ ಗಾಂಧಿ ಕರ್ನಾಟಕದಿಂದಾನೇ ಸ್ಪರ್ಧೆ ಮಾಡುತ್ತಾರೆ ಎಂಬ ಮಾತಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಪರಮೇಶ್ವರ್, ಪ್ರಿಯಾಂಕ ಗಾಂಧಿ ಕರ್ನಾಟಕಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಅಧ್ಯಕ್ಷರಿಗೆ ಗೊತ್ತಿರುತ್ತೆ ಅದೆಲ್ಲ. ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರಿದ್ದಾರೆ. ಅಂಥಹದ್ದೇನಾದರೂ ಬೆಳವಣಿಗೆ ಇದ್ದರೆ ಅವರಿಗೆ ಗೊತ್ತಾಗಬೇಕೆ ವಿನಃ ನಮಗೇನು ಗೊತ್ತಾಗುವುದಿಲ್ಲ. ಬಂದರೆ ಖಂಡಿತ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

ಮುದ್ದಹನುಮೇಗೌಡರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ಜಿ ಪರಮೇಶ್ವರ್, ಯಾವಾಗ ಸೇರ್ಪಡೆ ಬಗ್ಗೆ ನನಗೇನು ಗೊತ್ತಿಲ್ಲ. ಅವರು ಬರುವುದಕ್ಕೆ ತಯಾರಿದ್ದಾರೆ. ನಾವೂ ಕೂಡ ಎಲ್ಲರೂ ಸಹಮತಿ ಕೊಟ್ಟಿದ್ದೇವೆ. ಅವರನ್ನು ಸೇರಿಸಿಕೊಳ್ಳುವ ತೀರ್ಮಾನವನ್ನು ನಮ್ಮ ಅಧ್ಯಕ್ಷರು ಮಾಡಿದರೆ ಸ್ಚಾಗತ ಮಾಡುತ್ತೇವೆ ಎಂದಿದ್ದಾರೆ. ಇದೇ ವೇಳೆ ಟಿ ಬಿ ಜಯಚಂದ್ರ ಅವರು ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಮಾತಿಗೆ, ಇರಬಹುದು. ಆದರೆ ಅಂತಿಮವಾಗಿ ತೀರ್ಮಾನ ಮಾಡುವುದು ನಮ್ಮ ಸೆಂಟ್ರಲ್ ಎಲೆಕ್ಷನ್ ಕಮಿಟಿ ಹಾಗೂ ನಮ್ಮ ಹೈಕಮಾಂಡ್. ಅಲ್ಲಿಂದ ರೆಕಮಂಡೆ಼ನ್ ಬರಬೇಕು. ಟಿಬಿ ಜಯಚಂದ್ರ ಅವರ ಮಗನದ್ದು ಬರಬಹುದು, ಇವರದ್ದು ಬರಬಹುದು. ಆದರೆ ತೀರ್ಮಾನ ಮಾಡುವುದು ನಮ್ಮ ಹೈಕಮಾಂಡ್. ಅಲ್ಲಿ ನಿಯಮಗಳಿವೆ ಎಂದಿದ್ದಾರೆ.

 

ಇದೆ ವೇಳೆ ಬಿಜೆಪಿ ಹೇಳಿದ್ದ ಹೆಣ್ಣು ಮಕ್ಕಳಿಗೆ ಸುರಕ್ಷಿತವಲಗಲ ಎಂಬ ಹೇಳಿಕೆ ಬಗ್ಗೆ ಮಾತನಾಡಿ, ಅವರು ಸರ್ಕಾರ ನಡೆಸುವಾಗ ಯಾವ ಘಟನೆ ಆಗಿಲ್ವಾ. ಆಗ ಸೇಫ್ ಇತ್ತು ಅಂತ ಹೇಳಬಹುದಾ..? ಕಾನೂನಿನ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗದುಕೊಳ್ಳುತ್ತೀವಿ. ಮಹಿಳೆಯರ ರಕ್ಷಣೆಗಾಗಿ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಂಡಿದ್ದೀವಿ. ಇಂತಹ ಘಟನೆ ನಡೆದಂತ ಸಂದರ್ಭದಲ್ಲಿ ರಾಜ್ಯವೇ ಸುರಕ್ಷಿತವಲ್ಲ ಎಂದರೆ ಎಂದು ಪ್ರಶ್ನಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment