Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂಗ್ಲಿಷ್ ಭಾಷೆಗಾಗಿ ಕನ್ನಡ ಬಿಡಬೇಡಿ : ಸುಧಾಮೂರ್ತಿ ಕಿವಿಮಾತು

---Advertisement---

ಬೆಂಗಳೂರು: ಕನ್ನಡದವರೇ ಕನ್ನಡ ಮಾತನಾಡದೆ, ಕನ್ನಡದ ಉಳಿವಿಗಾಗಿ ಹೋರಾಟ ಶುರು ಮಾಡಿರುವುದೇ ದುರದೃಷ್ಟಕರ. ಕನ್ನಡದ ನೆಲದಲ್ಲಿ ಬೇರೆ ಭಾಷೆಗೇನೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿದೆ. ಕನ್ನಡವನ್ನು ಮರೆಯಬೇಡಿ ಎಂದು ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಕೂಡ ಮನವಿ ಮಾಡಿಕೊಂಡಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಧಾಮೂರ್ತಿ ಅವರು, ಇಂಗ್ಲಿಷ್ ಮಾತನಾಡಬೇಕು ಅಂತ ಕನ್ನಡವನ್ನು ಮರೆಯಬೇಡಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಅಂದರೆ ಕನ್ನಡ. ಮಕ್ಕಳ ಮನಸ್ಸು ಯಾವುದೇ ಪೂರ್ವ ಪೀಡತವಾಗಿರದೇ ಇರಲಿ. ನಾನು ಮಕ್ಕಳ ಪುಸ್ತಕ ಬರೆದಾಗ ಮಕ್ಕಳನ್ನೆ ಕೇಳುತ್ತೀನಿ, ಏನಾದರೂ ತಪ್ಪಿದ್ದರೆ ಹೇಳಿ ಅಂತ. ಬ್ರೈಟ್ ಐಡಿಯಾ ಬರುವುದೇ ಮಕ್ಕಳಿಂದ ಎಂದು ಹೇಳುವ ಮೂಲಕ ಕನ್ನಡ ಬಳಸಿ, ಕನ್ನಡ ಉಳಿಸಿ ಎಂಬ ಕಿವಿ ಮಾತು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬೇರೆ ರಾಜ್ಯದಿಂದ ಬಂದವರೇ ಹೆಚ್ಚು. ಎಲ್ಲಾ ಅಂಗಡಿಗಳು, ಶಾಪ್ ಗಳಲ್ಲೂ ಕನ್ನಡದ ಬೋರ್ಡ್ ಕಡ್ಡಾಯ ಮಾಡಲಾಗಿದೆ. ಆದರೂ ಕೆಲವೊಂದು ಕಡೆ ಆ ಕಡ್ಡಾಯದ ನೀತಿ ಕಾಣಿಸುವುದಿಲ್ಲ. ಹೀಗಾಗಿ ಇತ್ತಿಚೆಗೆ ಕನ್ನಡಪರ ಸಂಘಟನೆಗಳು ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಕನ್ನಡ ಬಳಕೆ ಕಡ್ಡಾಯಕ್ಕಾಗಿ ಪ್ರತಿಭಟನೆ ನಡೆಸಿ ಜೈಲು ಸೇರಿದ್ದಾರೆ. ಇನ್ನು ಹಲವು ಕನ್ನಡ ಪರ ಹೋರಾಟಗಾರರಿಗೆ ಜೈಲುವಾಸವೇ ಮುಂದುವರೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...