ಬೆಂಗಳೂರು: ಕನ್ನಡದವರೇ ಕನ್ನಡ ಮಾತನಾಡದೆ, ಕನ್ನಡದ ಉಳಿವಿಗಾಗಿ ಹೋರಾಟ ಶುರು ಮಾಡಿರುವುದೇ ದುರದೃಷ್ಟಕರ. ಕನ್ನಡದ ನೆಲದಲ್ಲಿ ಬೇರೆ ಭಾಷೆಗೇನೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತಿದೆ. ಕನ್ನಡವನ್ನು ಮರೆಯಬೇಡಿ ಎಂದು ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅವರು ಕೂಡ ಮನವಿ ಮಾಡಿಕೊಂಡಿದ್ದಾರೆ.
ಬ್ರ್ಯಾಂಡ್ ಬೆಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಧಾಮೂರ್ತಿ ಅವರು, ಇಂಗ್ಲಿಷ್ ಮಾತನಾಡಬೇಕು ಅಂತ ಕನ್ನಡವನ್ನು ಮರೆಯಬೇಡಿ ಎಂದಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಅಂದರೆ ಕನ್ನಡ. ಮಕ್ಕಳ ಮನಸ್ಸು ಯಾವುದೇ ಪೂರ್ವ ಪೀಡತವಾಗಿರದೇ ಇರಲಿ. ನಾನು ಮಕ್ಕಳ ಪುಸ್ತಕ ಬರೆದಾಗ ಮಕ್ಕಳನ್ನೆ ಕೇಳುತ್ತೀನಿ, ಏನಾದರೂ ತಪ್ಪಿದ್ದರೆ ಹೇಳಿ ಅಂತ. ಬ್ರೈಟ್ ಐಡಿಯಾ ಬರುವುದೇ ಮಕ್ಕಳಿಂದ ಎಂದು ಹೇಳುವ ಮೂಲಕ ಕನ್ನಡ ಬಳಸಿ, ಕನ್ನಡ ಉಳಿಸಿ ಎಂಬ ಕಿವಿ ಮಾತು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಬೇರೆ ರಾಜ್ಯದಿಂದ ಬಂದವರೇ ಹೆಚ್ಚು. ಎಲ್ಲಾ ಅಂಗಡಿಗಳು, ಶಾಪ್ ಗಳಲ್ಲೂ ಕನ್ನಡದ ಬೋರ್ಡ್ ಕಡ್ಡಾಯ ಮಾಡಲಾಗಿದೆ. ಆದರೂ ಕೆಲವೊಂದು ಕಡೆ ಆ ಕಡ್ಡಾಯದ ನೀತಿ ಕಾಣಿಸುವುದಿಲ್ಲ. ಹೀಗಾಗಿ ಇತ್ತಿಚೆಗೆ ಕನ್ನಡಪರ ಸಂಘಟನೆಗಳು ದೊಡ್ಡ ಹೋರಾಟವನ್ನೇ ಮಾಡಿದ್ದಾರೆ. ಕನ್ನಡ ಬಳಕೆ ಕಡ್ಡಾಯಕ್ಕಾಗಿ ಪ್ರತಿಭಟನೆ ನಡೆಸಿ ಜೈಲು ಸೇರಿದ್ದಾರೆ. ಇನ್ನು ಹಲವು ಕನ್ನಡ ಪರ ಹೋರಾಟಗಾರರಿಗೆ ಜೈಲುವಾಸವೇ ಮುಂದುವರೆದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










