ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ

1 Min Read

ಸುದ್ದಿಒನ್, ಚಿತ್ರದುರ್ಗ, ಜನವರಿ.13 : ಸಂಕ್ರಾಂತಿ ಹಬ್ಬವು ಹೊಸ ವರ್ಷದ ಹೊಸತನವನ್ನು ಎಲ್ಲರಲ್ಲಿ ತರಲಿ ಎಲ್ಲರೂ ಕೂಡ ಇಂದಿನಿಂದ  ಹೊಸ ವರ್ಷದ ವಸಂತಕ್ಕೆ ಕಾಲಿಟ್ಟು ಎಲ್ಲರನ್ನೂ ಪ್ರೀತಿ ಮತ್ತು ಗೌರವದಿಂದ ಕಾಣಿರಿ ಎಂದು ಬಾಪೂಜಿ  ಸಮೂಹ ಸಂಸ್ಥೆಯ ಕಾರ್ಯದರ್ಶಿ ಕೆ. ಎಂ. ವೀರೇಶ್ ಹೇಳಿದರು.

ನಗರದ ಹೊರವಲಯದ ಬಾಪೂಜಿ ಪಬ್ಲಿಕ್ ಶಾಲೆಯಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಕೆ. ಎಂ. ಚೇತನ್ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಕ್ಕಳಿಗೆ ಕೆಲವು ಸಲಹೆಗಳನ್ನು ನೀಡಿದರು. ನಂತರ ಎಲ್ಲ ಮುಖ್ಯೋಪಾಧ್ಯಾಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಹಾಗೆಯೇ ಮಕ್ಕಳು ಕೂಡ ತಮ್ಮ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಈ ಕಾರ್ಯಕ್ರಮದಲ್ಲಿ ಸಹ ಶಿಕ್ಷಕರುಗಳು ಹಾಗೂ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks