Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರ ನೇಮಕ : ಚಿತ್ರದುರ್ಗ ಜಿಲ್ಲಾಧ್ಯಕ್ಷ ಎ.ಮುರಳಿ ಅವಧಿ ವಿಸ್ತರಣೆ

---Advertisement---

 

ಸುದ್ದಿಒನ್, ಬೆಂಗಳೂರು, ಜನವರಿ. 15 : ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳಿಗೆ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದ್ದು, ಹಾಲಿ ಶಾಸಕರಾದ ರಾಯಚೂರಿನ ಡಾ. ಶಿವರಾಜ್ ಪಾಟೀಲ್ ಹಾಗೂ ಜಯನಗರದ ಸಿ.ಕೆ. ರಾಮಮೂರ್ತಿ ಹಾಗೂ ಮೂವರು ಮಾಜಿ ಶಾಸಕರಾದ ಎಲ್. ನಾಗೇಂದ್ರ, ಸಿಎಸ್. ನಿರಂಜನ್ ಕುಮಾರ್ ಮತ್ತು ಅರುಣ್ ಕುಮಾರ್ ಪೂಜಾರ ಅವರಿಗೂ ಜಿಲ್ಲಾಧ್ಯಕ್ಷ ಪಟ್ಟ ಒಲಿದುಬಂದಿದೆ.

ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎ. ಮುರುಳಿ ಅವರನ್ನು ಮರು ನೇಮಕ ಮಾಡಿದ್ದು ಅವಧಿಯನ್ನು ವಿಸ್ತರಿಸಲಾಗಿದೆ.

ಬಿಜೆಪಿ ಜಿಲ್ಲಾಧ್ಯಕ್ಷರ ಪಟ್ಟಿ

ಮೈಸೂರು ನಗರ- ಎಲ್. ನಾಗೇಂದ್ರ

ಮೈಸೂರು ಗ್ರಾಮಾಂತರ- ಎಲ್.ಆರ್. ಮಹದೇವಸ್ವಾಮಿ

ಚಾಮರಾಜನಗರ- ಸಿ.ಎಸ್. ನಿರಂಜನ್ ಕುಮಾರ್

ಮಂಡ್ಯ- ಇಂದ್ರೇಶ್ ಕುಮಾರ್

ಹಾಸನ- ಸಿದ್ದೇಶ್ ನಾಗೇಂದ್ರ

ಕೊಡಗು- ರವಿ ಕಾಳಪ್ಪ

ದಕ್ಷಿಣ ಕನ್ನಡ- ಸತೀಶ್ ಕುಂಪಲ

ಉಡುಪಿ- ಕಿಶೋರ್ ಕುಂದಾಪುರ

ಚಿಕ್ಕಮಗಳೂರು- ದೇವರಾಜ ಶೆಟ್ಟಿ

ಶಿವಮೊಗ್ಗ- ಟಿ.ಡಿ. ಮೇಘರಾಜ್

ಉತ್ತರ ಕನ್ನಡ- ಎನ್.ಎಸ್. ಹೆಗಡೆ

ಹಾವೇರಿ- ಅರುಣ್ ಕುಮಾರ್ ಪೂಜಾರ

ಹುಬ್ಬಳ್ಳಿ- ಧಾರವಾಡ- ತಿಪ್ಪಣ್ಣ ಮಜ್ಜಗಿ

ಧಾರವಾಡ ಗ್ರಾಮಾಂತರ- ನಿಂಗಪ್ಪ ಸುತ್ತಗಟ್ಟಿ

ಗದಗ- ರಾಜು ಕುರಡಗಿ

ಬೆಳಗಾವಿ ನಗರ- ಗೀತಾ ಸುತಾರ್

ಬೆಳಗಾವಿ ಗ್ರಾಮಾಂತರ- ಸುಭಾಷ್ ಪಾಟೀಲ್

ಚಿಕ್ಕೋಡಿ- ಸತೀಶ್ ಅಪ್ಪಾಜಿಗೋಳ್

ಬಾಗಲಕೋಟೆ- ಶಾಂತಗೌಡ ಪಾಟೀಲ್

ವಿಜಯಪುರ- ಆರ್.ಎಸ್. ಪಾಟೀಲ್

ಬೀದರ್- ಸೋಮನಾಥ‌ ಪಾಟೀಲ್

ಕಲ್ಬುರ್ಗಿ ನಗರ- ಚಂದ್ರಕಾಂತ ಪಾಟೀಲ್

ಕಲ್ಬುರ್ಗಿ ಗ್ರಾಮಾಂತರ- ಶಿವರಾಜ ಪಾಟೀಲ್ ರದ್ದೇವಾಡಿ

ಯಾದಗಿರಿ- ಅಮೀನ್ ರೆಡ್ಡಿ

ರಾಯಚೂರು- ಡಾ. ಶಿವರಾಜ ಪಾಟೀಲ್

ಕೊಪ್ಪಳ- ನವೀನ್ ಗುಳಗಣ್ಣನವರ್

ಬಳ್ಳಾರಿ- ಅನಿಲ್ ಕುಮಾರ್ ಮೋಕಾ

ವಿಜಯನಗರ- ಚನ್ನಬಸವನಗೌಡ ಪಾಟೀಲ್

ದಾವಣಗೆರೆ- ರಾಜಶೇಖರ್

ಚಿತ್ರದುರ್ಗ- ಎ. ಮುರಳಿ

ತುಮಕೂರು – ಹೆಚ್.ಎಸ್. ರವಿಶಂಕರ್

ಮಧುಗಿರಿ- ಬಿ.ಸಿ. ಹನುಮಂತೇಗೌಡ

ರಾಮನಗರ- ಆನಂದಸ್ವಾಮಿ

ಬೆಂಗಳೂರು ಗ್ರಾಮಾಂತರ- ರಾಮಕೃಷ್ಣಪ್ಪ

ಚಿಕ್ಕಬಳ್ಳಾಪುರ-ರಾಮಲಿಂಗಪ್ಪ

ಕೋಲಾರ- ಡಾ. ಕೆ.ಎನ್. ವೇಣುಗೋಪಾಲ್

ಬೆಂಗಳೂರು ಉತ್ತರ- ಎಸ್. ಹರೀಶ್

ಬೆಂಗಳೂರು ಕೇಂದ್ರ- ಸಪ್ತಗಿರಿಗೌಡ

ಬೆಂಗಳೂರು ದಕ್ಷಿಣ- ಸಿ.ಕೆ. ರಾಮಮೂರ್ತಿ

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...