Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ವಿರುದ್ಧ ಜೆಡಿಎಸ್, ಬಿಜೆಪಿ ವಾಗ್ದಾಳಿ: ಸಿಎಂ-ಡಿಸಿಎಂ ಪರ ನಿಲ್ಲಲು ಶಾಸಕರು, ಸಚಿವರಿಗೆ ಹೈಕಮಾಂಡ್ ಸೂಚನೆ

---Advertisement---

ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಾಗಲೇ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ಸೋಲಿಸಲು ಜೆಡಿಎಸ್ ಹಾಗೂ ಬಿಜೆಪಿ ಒಂದಾಗಿವೆ. ಹೀಗಾಗಿಯೇ ಕಾಂಗ್ರೆಸ್ ಮೇಲೆ ಯಾವಾಗಲೂ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಈ ಸಂಬಂಧ ಶಾಸಕರು ಹಾಗೂ ಸಚಿವರಿಗೆ ಹೈಕಮಾಂಡ್ ಒಂದು ಸೂಚನೆ ನೀಡಿದೆ.

ವಿಪಕ್ಷಗಳ ಆರೋಪಕ್ಕೆ ಆಡಳಿತ ಪಕ್ಷ ತಿರುಗೇಟು ನೀಡುವುದರಲ್ಲಿ ಎಡವುತ್ತಿದೆ. ಇದೇ ವಿಚಾರಕ್ಕೆ ಹೈಕಮಾಂಡ್ ನಾಯಕರು ಗರಂ ಆಗಿದ್ದಾರೆ. ಸಿಎಂ ಹಾಗೂ ಡಿಸಿಎಂ ಬೆಂಬಲಕ್ಕೆ ಯಾಕೆ ಯಾರು ಬರುತ್ತಿಲ್ಲವೆಂದು ಪ್ರಶ್ನಿಸಿದೆ. ಸಿಎಂ – ಡಿಸಿಎಂ ಬೆಂಬಲಕ್ಕೆ ಸಚಿವರು, ಶಾಸಕರು ಯಾಕೆ ಮುಂದೆ ಬರುತ್ತಿಲ್ಲ. ವಿವಾದ – ಗೊಂದಲಗಳ ಸಂದರ್ಭದಲ್ಲಿ ಶಾಸಕರು, ಸಚಿವರು, ಸಿಎಂ ಹಾಗೂ ಡಿಸಿಎಂ ಬೆಂಬಲಕ್ಕೆ ನಿಲ್ಲುತ್ತಿಲ್ಲ. ಶಾಸಕರು ಕೂಡ ವಿರೋಧ ಪಕ್ಷಗಳ ತಂತ್ರಗಾರಿಕೆಗೆ ಕೌಂಟರ್ ಕೊಡುವ ಕೆಲಸ ಮಾಡಬೇಕು. ಕೇವಲ ಸಿಎಂ ಹಾಗೂ ಡಿಸಿಎಂ ಮಾತ್ರ ಸರ್ಕಾರದ ಸಮರ್ಥನೆ ಮಾಡಿಕೊಂಡರೆ ಸಾಲದು ಎಂದಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ಶಾಸಕರೇ ಜನರ ಮುಂದಿಡಬೇಕು. ಹಾಗೇ ಸರ್ಕಾರದ ಕೆಲಸಗಳ ಬಗ್ಗೆಯೂ ಜನರಿಗೆ ತಲುಪಿಸಬೇಕು. ವಿಪಕ್ಷಗಳು ಅಟ್ಯಾಕ್ ಮಾಡುವಾಗ ಶಾಸಕರೇ ಸರ್ಕಾರದ ಸಿಎಂ – ಡಿಸಿಎಂ ಬೆಂಬಲಕ್ಕೆ ಬರಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳ ಬಗ್ಗೆ ಅಧ್ಯಯನ ಮಾಡಿ ಎಂದು ಹೈಕಮಾಂಡ್ ರಾಜ್ಯದ ಸಚಿವರು, ಶಾಸಕರಿಗೆ ಸೂಚನೆ ನೀಡಿದೆ. ಇನ್ಮುಂದೆ ಸಿಎಂ ಹಾಗೂ ಡಿಸಿಎಂ ಜೊತೆಗೆ‌ ವಿಪಕ್ಷಗಳನ್ನು ಎದುರಿಸಲು ಸಚಿವರು, ಶಾಸಕರು ಕೂಡ ಸಜ್ಜಾಗಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment