Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬಗ್ಗೆ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ : ಅವನೊಬ್ಬ ಹುಚ್ಚ ಎಂದ ಸಚಿವ ಆಂಜನೇಯ

Facebook
Twitter
Telegram
WhatsApp

ಚಿತ್ರದುರ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ, ವಿಪಕ್ಷ ನಾಯಕರೆಲ್ಲಾ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಅದರಲ್ಲೂ ಸಾಕಷ್ಟು ದಿನಗಳಿಂದ ಸೈಲೆಂಟ್ ಆಗಿದ್ದ ಅನಂತ್ ಕುಮಾರ್ ಹೆಗಡೆ ಅವರು ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನಂತ್ ಹೆಗಡೆ ಅವರ ಮಾತನ್ನು ಬಿಜೆಪಿ ನಾಯಕ ವಿ ಸೋಮಣ್ಣ ಕೂಡ ವಿರೋಧಿಸಿದ್ದಾರೆ. ಕಾಂಗ್ರೆಸ್ ನಾಯಕರು ಸಹ ಅವರ ಮಾತುಗಳನ್ನು ಖಂಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್ ಆಂಜನೇಯ, ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ. ಅನಂತ ಕುಮಾರ್‌ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಮಾತಾಡ್ತಾರಾ?. ಅವನ ಬಗ್ಗೆ ಮಾತಾಡಲ್ಲ. ಅವನ ಬಗ್ಗೆ ಮಾತಾಡಿ ದೊಡ್ಡವನನ್ನಾಗಿಸಿದಂತೆ ಆಗುತ್ತದೆ’ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದೆ ವೇಳೆ ಮುನಿಸ್ವಾಮಿ ವಿರುದ್ದವೂ ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಬಿಜೆಪಿ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಹಿಂದೂ ಧರ್ಮ, ರಾಮ ಪೂಜೆ ಮಾಡುವವರು ಹೆಚ್ಚಿರುವುದು ಕಾಂಗ್ರೆಸ್ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಂಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ ಎಂದರು.

ಅಯೋಧ್ಯೆಯಲ್ಲಿ ಇದೇ ತಿಂಗಳ 22ಕ್ಕೆ ರಾಮಮಂದಿರ ಉದ್ಘಾಟನೆಯಾಗಲಿದೆ. ಆದರೆ ಕಾಂಗ್ರೆಸ್ ನವರು ಹೋಗುತ್ತಿಲ್ಲ. ಈ ಬಗ್ಗೆ ಮಾತನಾಡಿ, ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮ. ನಾವು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿ ಅಲ್ಲ. ಹಿಂದೂಗಳ ಪರ, ಮುಸ್ಲಿಂರ ಪರ ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದು ಮಾಜಿ ಸಚಿವ ಆಂಜನೇಯ ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!