Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಕ್ರೀಡೆಯನ್ನು ಪ್ರೋತ್ಸಾಹಿಸುವವರ ಸಂಖ್ಯೆ ಕಡಿಮೆಯಾಗಿರುವುದು ನೋವಿನ ಸಂಗತಿ : ಹಿರಿಯ ನ್ಯಾಯವಾದಿ ಫಾತ್ಯರಾಜನ್

---Advertisement---

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.15 : ಪ್ರಪಂಚದಲ್ಲಿಯೇ ಬೆಸ್ಟ್ ಗೇಮ್ ಎನಿಸಿಕೊಂಡಿರುವ ಫುಟ್‍ಬಾಲನ್ನು ಕಿಂಗ್ ಆಫ್ ದ ಗೇಮ್ ಎಂದು ಕರೆಯಲಾಗುತ್ತದೆ. ಗೋಲ್ ಹೊಡೆಯಬೇಕಾದರೆ ನಿರ್ಧಿಷ್ಟ ಕರಾರುವಕ್ಕಾಗಿರಬೇಕೆಂದು ಹಿರಿಯ ನ್ಯಾಯವಾದಿ ಫಾತ್ಯರಾಜನ್ ಹೇಳಿದರು.

ಚಿತ್ರದುರ್ಗ ಫುಟ್‍ಬಾಲ್ ಕ್ಲಬ್ ವತಿಯಿಂದ ಸ್ಟೇಡಿಯಂನಲ್ಲಿ ನಡೆದ ಫಾತ್ಯರಾಜನ್ ಯೂತ್ ಕಪ್ ಪಂದ್ಯದಲ್ಲಿ ವಿಜೇತರಿಗೆ ಕಪ್ ವಿತರಿಸಿ ಮಾತನಾಡಿದರು.

ಚಿತ್ರದುರ್ಗದಲ್ಲಿ ಅನೇಕ ಕ್ರೀಡೆಗಳು ನಡೆಯುತ್ತವೆ. ಆದರೆ ಪ್ರೋತ್ಸಾಹಿಸುವವರು ಕಮ್ಮಿಯಿರುವುದು ನೋವಿನ ಸಂಗತಿ. ಜೀವನದಲ್ಲಿ ಮುಂದೆ ಒಳ್ಳೆಯ ಕ್ರೀಡಾಪಟುಗಳಾಗಿ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಫುಟ್‍ಬಾಲ್ ಆಟಗಾರರಿಗೆ ಹಾರೈಸಿದರು.

ಡಾ.ರಾಜೇಶ್ ಮಾತನಾಡಿ ಫುಟ್‍ಬಾಲ್ ಒಳ್ಳೆಯ ಆಟ. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬಹುದು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಅವಕಾಶವಿದೆ. ಆವೇಷವನ್ನು ಕ್ರೀಡೆಯಲ್ಲಿ ಪ್ರದರ್ಶಿಸಿ ಅಂಗಗಳಿಗೆ ಊನ ಮಾಡಕೊಳ್ಳಬೇಡಿ ಎಂದು ಎಚ್ಚರಿಸಿದರು.

ಅಕ್ರಮ್‍ನಾಗ್ತೆ ಮಾತನಾಡುತ್ತ ಇದು ಮೂರನೆ ವರ್ಷದ ಪಂದ್ಯವಾಗಿದ್ದು, ನಾವುಗಳು ಚಿಕ್ಕವರಿದ್ದಾಗ ಫಾತ್ಯರಾಜನ್‍ರವರು ಫುಟ್‍ಬಾಲ್‍ಗೆ ಉತ್ತೇಜನ ನೀಡಿ ಹಣದ ಸಹಾಯವನ್ನು ಮಾಡಿದ್ದಾರೆ. ಅದಕ್ಕಾಗಿ ಅವರ ಹೆಸರಿನಲ್ಲಿಯೇ ಯೂತ್ ಕಪ್ ನಡೆಸಲು ತೀರ್ಮಾನಿಸಿ ಪ್ರತಿ ವರ್ಷವೂ ಆಯೋಜಿಸಲಾಗುವುದು ಎಂದು ಹೇಳಿದರು.
ಅಂತರಾಷ್ಟ್ರೀಯ ವೈಟ್ ಲಿಫ್ಟರ್ ಎನ್.ಡಿ.ಕುಮಾರ್, ಎಂ.ಡಿ.ನವಾಜ್, ಸಿದ್ದಿಕ್, ವಸಂತ್ ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...