Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನನ್ನದು ತೆರೆದ ಪುಸ್ತಕ, ಮ್ಯಾಚ್ ಫಿಕ್ಸಿಂಗ್ ಇಲ್ಲ, ಸರ್ವಾಧಿಕಾರಿಯೂ ಅಲ್ಲ : ರೇಣುಕಾಚಾರ್ಯ ಹೀಂಗದಿದ್ಯಾಕೆ..?

Facebook
Twitter
Telegram
WhatsApp

ದಾವಣಗೆರೆ: ಕಾಂಗ್ರೆಸ್ ಒಡೆದ ಮನೆಯಾಗಿದೆ. ಕೇವಲ ಮೂರಷ್ಟೇ ಅಲ್ಲ, ತ್ರಿವಳಿ ಡಿಸಿಎಂ ಅಲ್ಲ. ಈಗೇನು ಮುಖ್ಯಮಂತ್ರಿ ಹೊರತುಪಡಿಸಿದೆಯಲ್ಲ, 32 ಸ್ಥಾನವನ್ನು ಡಿಸಿಎಂ ಸ್ಥಾನವೆಂದು ಘೋಷಿಸಲಿ. ಈ ಬಿಟ್ಟಿ ಭರವಸೆಗಳು, ಎಲ್ಲವೂ ಬೋಗಸ್ ಅದು ಅಂತ ಕಾಂಗ್ರೆಸ್ ಮೇಲೆ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಇದೆ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಸೇರಿ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.

ನಾಳೆ ಕುಮಾರಸ್ವಾಮಿ ಅವರು ದೆಹಲಿಗೆ ಹೋಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಹೋಗ್ಲಿ ಬಿಡು, ಅವರು ನಮ್ಮ ಪಲ್ಷದವರೇ. ಸೀಟು ಎಷ್ಟು ಕೊಡುತ್ತಾರೆ ಬಿಡುತ್ತಾರೆ ಎಂಬುದನ್ನು ಹೇಳುವುದಕ್ಕೆ ನಾನು ಯಾರು..? ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ನರೇಂದ್ರ ಮೋದಿ, ಅಮಿತ್ ಶಾ, ಭಾರತೀಯ ಜನತಾ ಪಾರ್ಟಿ, ಜೆಡಿಎಸ್ ಒಟ್ಟಾಗಿ ಹೋಗಬೇಕು. ಬರೀ ಸೀಟು ಹೊಂದಾಣಿಕೆ ಮಾತ್ರವಲ್ಲ, ಭಿನ್ನಾಭಿಪ್ರಾಯ, ಸಂಘರ್ಷಗಳನ್ನು ಬಿಡಬೇಕು. ಸಾಮರಸ್ಯದಿಂದ ಹೋದರೆ 28ಕ್ಕೆ 28 ಸೀಟು ಖಂಡಿತ ಗೆಲ್ಲುತ್ತೇವೆ. ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದಿದ್ದಾರೆ. ರಾಮನ ಜಪ ಮಾಡಿ ಎಂದರೆ ಮಾತೆತ್ತಿದ್ದರೆ ಅಲ್ಲ ಅಲ್ಲ ಅಂತಾರೆ. ನಾವೂ ಅಲ್ಲ ವಿರೋಧಿಗಳಲ್ಲ. ಈ ಸರ್ಕಾರಕ್ಕೆ ರಾಮನ ಕರಸೇವಕರ ಶಾಪ, ರೈತರ ಶಾಪ, ಮಹಿಳೆಯರ ಶಾಪ ತಟ್ಟುತ್ತದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಕಾದು ನೋಡಿ ಎಂದು ಗರಂ ಆಗಿದ್ದಾರೆ.

ಲೋಕಸಭೆಗೆ ರೇಣುಕಾಚಾರ್ಯ ನಿಲ್ಲುತ್ತಾರಾ ಎಂಬ ಹೇಳಿಕೆಗೆ, ಇಲ್ಲಿ ರೇಣುಕಾಚಾರ್ಯ ಯಾವತ್ತಿಗೂ ತೆರೆದ ಹೃದಯ. ಮ್ಯಾಚ್ ಫಿಕ್ಸಿಂಗ್ ಇಲ್ಲ, ಸರ್ವಾಧಿಕಾರಿಯೂ ಅಲ್ಲ, ದಾವಣಗೆರೆ ಜಿಲ್ಲೆಯಿಂದ ಬಿಜೆಪಿ ಲೋಕಸಭೆ ಗೆಲ್ಲಬೇಕು ಎಂಬುದಿದೆ. ರೇಣುಕಾಚಾರ್ಯ ಆಸೆ ಮಾತ್ರವಲ್ಲ, ಜಿಲ್ಲೆಯ ಪ್ರತಿಯೊಬ್ಬ ಮತದಾರನ ಆಸೆ. ಸಮೀಕ್ಷೆ ಮಾಡಿಸಲಿ. ಅದರಲ್ಲಿ ಹೆಚ್ಚು ಅಂಕ ಬಂದವರಿಗೆ ಟಿಕೆಟ್ ನೀಡಲಿ. ಅವರಿಗಾಗಿ ನಾವೂ ದುಡಿಯುತ್ತೇವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!