Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಬರ ಪರಿಹಾರ ಶೀಘ್ರ : ಕೆಡಿಪಿ ಸಭೆಯಲ್ಲಿ ಜಂಟಿಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.16 : ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ರಾಜ್ಯ ಸರ್ಕಾರದಿಂದಲೇ ರೈತರಿಗೆ ಗರಿಷ್ಟ 2 ಸಾವಿರ ಪರಿಹಾರವನ್ನು ಪಾವತಿಸಲು ಅಗತ್ಯ ದತ್ತಾಂಶವನ್ನು ಈಗಾಗಲೆ ಸಲ್ಲಿಸಲಾಗಿದ್ದು, ಶೀಘ್ರವೇ ಪರಿಹಾರ ಮೊತ್ತ ರೈತರಿಗೆ ಪಾವತಿಯಾಗಲಿದೆ ಎಂದು ಜಂಟಿಕೃಷಿ ನಿರ್ದೇಶಕ ಮಂಜುನಾಥ್ ತಿಳಿಸಿದರು.

ಮಳೆಯ ಕೊರತೆಯಿಂದಾಗಿ ಜಿಲ್ಲೆಯ 06 ತಾಲ್ಲೂಕುಗಳನ್ನು ಈಗಾಗಲೆ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ 2.35 ಲಕ್ಷ ಹೆ. ನಲ್ಲಿ ಬೆಳೆ ಹಾನಿಯಾಗಿದೆ.
ಹೀಗಾಗಿ ನಿಯಮಾನುಸಾರ ಇನ್‍ಪುಟ್ ಸಬ್ಸಿಡಿ ನೀಡುವಂತೆ ಜಿಲ್ಲೆಯಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಬೆಳೆ ಪರಿಹಾರ ಪಾವತಿಯಲ್ಲಿ ದುರುಪಯೋಗ ತಡೆಯಲು ಈ ಬಾರಿ ಫ್ರುಟ್ಸ್ ತಂತ್ರಾಂಶ ಹಾಗೂ ಬೆಳೆ ಕಟಾವು ಸಮೀಕ್ಷೆ ಆಧಾರದಲ್ಲಿ ಪರಿಹಾರವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಫ್ರುಟ್ಸ್ ತಂತ್ರಾಂಶದಲ್ಲಿ ಮಾಹಿತಿ ಜೋಡಣೆ ಕಾರ್ಯ ಜಿಲ್ಲೆಯಲ್ಲಿ ಈಗಾಗಲೆ ಶೇ. 81 ರಷ್ಟು ಪೂರ್ಣಗೊಂಡಿದ್ದು, ರೈತ ಸಮುದಾಯದಲ್ಲಿ ಈ ಬಗ್ಗೆ ವ್ಯಾಪಕ ತಿಳುವಳಿಕೆ ನೀಡುವ ಕಾರ್ಯ ನಡೆಯುತ್ತಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!